ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರು, ಲಾರಿ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟು, ಓರ್ವ ಚಿಂತಾಜನಕವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಹೊರವಲಯದಲ್ಲಿರುವ ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ ಬಳಿ ನಡೆದಿದೆ.
08:16 PM Dec 16, 2023 IST | Ashika S

ನಾಗ್ಪುರ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟು, ಓರ್ವ ಚಿಂತಾಜನಕವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಹೊರವಲಯದಲ್ಲಿರುವ ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ ಬಳಿ ನಡೆದಿದೆ.

Advertisement

ಸಂಬಂಧಿಕರೊಬ್ಬರ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಸ್​ ಆಗುತ್ತಿದ್ದ ವೇಳೆ ಕಾರು ಹಾಗೂ ಸೋಯಾಬೀನ್​ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಮೃತರನ್ನು ಮಯೂರ್ ಇಂಗಳೆ (22), ವೈಭವ್ ಚಿಖಲೆ (32), ಸುಧಾಕರ್​ ಮಾನಕರ್​ (42), ವಿಠ್ಠಲ್ ತೋಟೆ (45), ಅಜಯ್ ಚಿಖಲೆ (40) ಮತ್ತು ರಮೇಶ ಹಲೊಂಡೆ ಎಂದು ಗುರುತಿಸಲಾಗಿದೆ. ಜಗದೀಶ್ ಧೋನ್ ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Advertisement
Tags :
LatestNewsNewsKannadaಅಪಘಾತಕಾರುಚಿಂತಾಜನಕಮೃತಲಾರಿ
Advertisement
Next Article