For the best experience, open
https://m.newskannada.com
on your mobile browser.
Advertisement

ತಂಗಿ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆಗೈದು ಹೂತು ಹಾಕಿದ ಅಕ್ಕ

ಎಲೆ, ಅಡಿಕೆ ತಿನ್ನಿಸಿ 9 ತಿಂಗಳ ಮಗುವನ್ನು ಅಜ್ಜಿ ಕೊಲೆ ಮಾಡಿದ ಆರೋಪ ಗದಗದಲ್ಲಿ ಇತ್ತೀಚೆಗೆ ಕೇಳಿಬಂದಿತ್ತು. ಇದರ ಬೆನ್ನಲ್ಲೇ, ಚಿಕ್ಕಬಳ್ಳಾಪುರದಲ್ಲಿ ತಾ|ಮುತಕದಹಳ್ಳಿ ಗ್ರಾಮದಲ್ಲಿ ತನ್ನ ಅನೈತಿಕ ಸಂಬಂಧಕ್ಕೆ ತಂಗಿ ಅಡ್ಡ ಬರುತ್ತಾಳೆಂದು ಆಕೆಯ ಆರು ವರ್ಷದ ಮಗನನ್ನು ಅಕ್ಕ ಕೊಲೆ ಮಾಡಿದ ಘಟನೆ ಪ್ರಕರಣ ಬೆಳಕಿಗೆ ಬಂದಿದೆ.
12:15 PM Dec 01, 2023 IST | Ashitha S
ತಂಗಿ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆಗೈದು ಹೂತು ಹಾಕಿದ ಅಕ್ಕ

ಚಿಕ್ಕಬಳ್ಳಾಪುರ: ಎಲೆ, ಅಡಿಕೆ ತಿನ್ನಿಸಿ 9 ತಿಂಗಳ ಮಗುವನ್ನು ಅಜ್ಜಿ ಕೊಲೆ ಮಾಡಿದ ಆರೋಪ ಗದಗದಲ್ಲಿ ಇತ್ತೀಚೆಗೆ ಕೇಳಿಬಂದಿತ್ತು. ಇದರ ಬೆನ್ನಲ್ಲೇ, ಚಿಕ್ಕಬಳ್ಳಾಪುರದಲ್ಲಿ ತಾ|ಮುತಕದಹಳ್ಳಿ ಗ್ರಾಮದಲ್ಲಿ ತನ್ನ ಅನೈತಿಕ ಸಂಬಂಧಕ್ಕೆ ತಂಗಿ ಅಡ್ಡ ಬರುತ್ತಾಳೆಂದು ಆಕೆಯ ಆರು ವರ್ಷದ ಮಗನನ್ನು ಅಕ್ಕ ಕೊಲೆ ಮಾಡಿದ ಘಟನೆ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಅಂಬಿಕಾ ಹಾಗೂ ಅನಿತಾ ಅಕ್ಕ ತಂಗಿಯರು. ಆದರೆ ಅಂಬಿಕಾ ಅನೈತಿಕ ಸಂಬಂಧ ಹೊಂದಿದ್ದ ವಿಚಾರ ಅನಿತಾಗೆ ತಿಳಿದು ಬಂದಿದೆ. ಅದರಂತೆ ವಿರೋಧವೂ ವ್ಯಕ್ತಪಡಿಸಿದ್ದಳು. ಇದರಿಂದ ಕೋಪಗೊಂಡ ಅಂಬಿಕಾ, ಅನಿತಾಳ ಆರು ವರ್ಷದ ಮಗ ಮಧುನನ್ನು ಕೊಲೆ ಮಾಡಿ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ಹೂತು ಹಾಕಿದ್ದಾಳೆ. ಸ್ಥಳಕ್ಕೆ ಪೆರೆಸಂದ್ರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Advertisement
Tags :
Advertisement