ಪಿಹೆಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.
08:13 AM May 02, 2024 IST | Chaitra Kulal
ಬೆಂಗಳೂರು: ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.
Advertisement
ವಿದ್ಯಾರ್ಥಿಯನ್ನು ರಂಗನಾಥ್ ನಾಯಕ್ (27) ಎಂದು ಗುರುತಿಸಲಾಗಿದೆ. ಈತ ಚಿಕ್ಕಬಳ್ಳಾಪುರ ಮೂಲದವನು. ಕಳೆದ ಕೆಲ ತಿಂಗಳುಗಳ ಹಿಂದೆ ಬಸ್ ಆ್ಯಕ್ಸಿಡೆಂಟ್ ನಲ್ಲಿ ರಂಗನಾಥ್ ಗಾಯಗೊಂಡಿದ್ದನು. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ. ಹೀಗಾಗಿ ಆಯುರ್ವೇದಿಕ್ ಔಷಧಿ ಪಡೆಯುತ್ತಿದ್ದನು.
ಬುಧವಾರ ಬೆಳಗ್ಗೆ ಕ್ಯಾಂಟೀನ್ ಗೆ ಹೋಗಿ ತಿಂಡಿ ತಿಂದು ರೂಮಿಗೆ ಹೋಗಿದ್ದ ರಂಗನಾಥ್ ನಂತರ ರೂಮ್ ಲಾಕ್ ಹಾಕಿಕೊಂಡಿದ್ದನು. ಮಧ್ಯಾಹ್ನ ರೂಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆಯಲಿಲ್ಲ. ಹೀಗಾಗಿ ಡೋರ್ ಒಡೆದು ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Advertisement
Advertisement