For the best experience, open
https://m.newskannada.com
on your mobile browser.
Advertisement

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ನಡೆದಿದೆ.
06:42 AM May 04, 2024 IST | Chaitra Kulal
ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಮಂಗಳೂರು: ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ನಡೆದಿದೆ.

Advertisement

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಾವನ್ನಪ್ಪಿದ ದುರ್ದೈವಿ. ಸೋಮಸುಂದರ್ 10 ದಿನಗಳ ಹಿಂದಷ್ಟೇ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿರಿಸಿದ್ದನು. ಸಂಜೆ ಸಮಯದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಅಂಗಳದಲ್ಲಿದ್ದ ಅಡಿಕೆಗಳನ್ನು ರಾಶಿ ಮಾಡುತ್ತಿದ್ದರು. ಈ ವೇಳೆ ಭಯಾನಕವಾಗಿ ಸಿಡಿಲು ಬಡಿದಿದೆ.

ತಕ್ಷಣ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

Advertisement
Tags :
Advertisement