ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ
ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು.
05:55 PM Apr 26, 2024 IST | Chaitra Kulal
ಕಾರ್ಕಳ: ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು.
Advertisement
ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ರವರ ಜೇಷ್ಠ ಪುತ್ರ ಏಕಲವ್ಯ ಆರ್ ಕಟೀಲ್ ಇಂದು ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು.
ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಫೋಟೋ ಕ್ಲಿಕಿಸಿ ಖುಷಿಪಟ್ಟರು.
Advertisement
Advertisement