ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಳಚಿದ ಕನ್ನಡದ ಹಿರಿಯ ಕೊಂಡಿ; ಸ್ಯಾಂಡಲ್ ವುಡ್ ನಟ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
11:54 AM Apr 16, 2024 IST | Ashitha S

ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisement

ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ದರು.

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು.

Advertisement

Advertisement
Tags :
bengaluruBreakingNewsdeathindiaLatestNewsNewsKannadaNewsKarnatakaSANDALWOOD
Advertisement
Next Article