ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ ವಿಡಿಯೋ ಲೀಕ್‌ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.
01:17 PM May 09, 2024 IST | Ashitha S

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ ವಿಡಿಯೋ ಲೀಕ್‌ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

Advertisement

ಜ್ಯೋತಿ ರೈ ಅವರದ್ದೇ ಎನ್ನುವ ಫೋಟೋಗಳು ಮತ್ತು ವಿಡಿಯೋಗಳು ವಾಟ್ಸಾಪ್‌ನಲ್ಲಿ ಸಂಚಲನ ಸೃಷ್ಟಿಸಿವೆ. ಈಗಾಗಲೇ ಕರ್ನಾಟಕದಲ್ಲಿ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌ ಚಾಲ್ತಿಯಲ್ಲಿರುವಾಗಲೇ ಜ್ಯೋತಿ ರೈ ಖಾಸಗಿ ವಿಡಿಯೋಗಳು ಲೀಕ್‌ ಆಗಿದ್ದು ಚರ್ಚೆಗೆ ಕಾರಣವಾಗಿವೆ. ಎಡಿಟ್ ಬೈ ಅಭಿ ಎನ್ನುವ ಎಕ್ಸ್ ಖಾತೆಯಲ್ಲಿ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತೇನೆ ಎಂದು ಬಹಿರಂಗವಾಗಿಯೇ ಬರೆದುಕೊಂಡಿದ್ದಾನೆ.

ಸೋಷಿಯಲ್‌ ಮೀಡಿಯಾದಲ್ಲಿ ಜ್ಯೋತಿ ರೈ ಅವರದ್ದೇ ಎನ್ನಲಾದ ವಿಡಿಯೋ ಮತ್ತು ಫೋಟೋಗಳು ಹರಿದಾಡುತ್ತಿವೆಯಾದರೂ, ಈ ಬಗ್ಗೆ ನಟಿ ತುಟಿ ಬಿಚ್ಚಿಲ್ಲ. ವಿಡಿಯೋ ಲೀಕ್‌ ಬಳಿಕ ತಮ್ಮದೇ ಇನ್‌ಸ್ಟಾಗ್ರಾಂನಲ್ಲಿ ಎರಡನೇ ಪತಿ ಸುಕು ಪೂರ್ವಜ್‌ ಜತೆಗಿನ ಫೋಟೋ ಶೇರ್‌ ಮಾಡಿ ಹಾರ್ಟ್‌ ಎಮೋಜಿ ಹಾಕಿ ಸ್ಟೋರಿ ಪೋಸ್ಟ್‌ ಮಾಡಿದ್ದಾರೆ. ಬಹಿರಂಗವಾಗಿಯೂ ಎಲ್ಲಿಯೂ ಈ ಘಟನೆಯ ಬಗ್ಗೆ ಅವರು ಮಾತನಾಡಿಲ್ಲ.

Advertisement

ಆದರೆ ಕಳೆದ ಕೆಲ ದಿನಗಳ ಹಿಂದೆಯೇ, ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದ ಜ್ಯೋತಿ ರೈ, "ನನಗೆ ಕೆಲವೊಂದು ಸಂದೇಶಗಳು ಮಾನಸಿಕ ಆಘಾತವನ್ನುಂಟು ಮಾಡಿವೆ. ನನ್ನನ್ನು ಮತ್ತು ನನ್ನ ಕುಟುಂಬದ ಗೌರವ, ಪ್ರತಿಷ್ಠೆಯನ್ನು ಹಾಳು ಮಾಡುವ ಉದ್ದೇಶಕ್ಕೆ ಈ ರೀತಿಯ ಕೃತ್ಯ ಎಸಗುತ್ತಿದ್ದಾರೆ. ಇವರಿಂದ ನನ್ನ ಕುಟುಂಬ ಅಪಾಯದಲ್ಲಿದೆ. ಹಾಗಾಗಿ ಇಂಥವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಅವರಿಂದ ನಾನು ದೊಡ್ಡ ಪ್ರಮಾಣದಲ್ಲಿ ಮಾನಹಾನಿ ಆಗಲಿದೆ. ಈ ದೂರಿನ ಮೂಲಕ ಸಂಬಂಧಪಟ್ಟ ಐಡಿಗಳನ್ನು ನಾನು ನಿಮಗೆ ನೀಡುತ್ತಿದ್ದೇನೆ" ಎಂದಿದ್ದರು.

ಸದಾ ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಟಿವ್ ಆಗಿರುವ ಜ್ಯೋತಿ ರೈ… ಆಗಾಗ್ಗೆ ಹಾಟ್ ಫೋಟೋಗಳನ್ನು ಶೇರ್ ಮಾಡಿ, ಅಭಿಮಾನಿಗಳ ಹೃದಯಕ್ಕೆ ಕಿಚ್ಚು ಹಚ್ಚಿಸುತ್ತಿರುತ್ತಾರೆ. ಆದರೆ, ಈ ಬಾರಿ ಅವರು ಅಶ್ಲೀಲ ವಿಡಿಯೋಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹಲ್ಚೆಲ್ ಎಬ್ಬಿಸಿದ್ದರು.

 

Advertisement
Tags :
GOVERNMENTindiaNewsKarnatakaಜ್ಯೋತಿ ರೈಬೆಂಗಳೂರು
Advertisement
Next Article