ವಿಮಾನ ಇಂಜಿನ್ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
01:34 PM May 19, 2024 IST | Nisarga K
ಬೆಂಗಳೂರು : ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Advertisement
ಬೆಂಗಳೂರು ವಿಮಾನ ನಿಲ್ದಾಣ ವಕ್ತಾರರ ಹೇಳಿಕೆಯ ಪ್ರಕಾರ , ಲ್ಯಾಂಡಿಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು ಎಂದಿದ್ದಾರೆ. ಸುಮಾರು 11.12 ಕ್ಕೆ ವಿಮಾನ ಟೇಕ್ ಆಫ್ ಮಾಡಿದೆ. ನಂತರ ತಕ್ಷಣ ಏರ್ ಟ್ರಾಫಿಕ್ ಕಂಟ್ರೋಲರ್ಗೆ ವರದಿ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement