For the best experience, open
https://m.newskannada.com
on your mobile browser.
Advertisement

ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ. ಹಸ್ತಾಂತರ

ತಾಲೂಕಿನ ಹೆಗ್ಗೆರಿಯ ಜಗದೀಶ ನಗರದಲ್ಲಿರುವ ಶ್ರೀ ದುರ್ಗಾದೇವಿ ಶ್ರೀ ಅಂಬಾಭವಾನಿ ದೇವಸ್ಥಾನಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದಿಂದ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 2 ಲಕ್ಷ ರೂ. ಮಂಜೂರಾಗಿದ್ದು, ಡಿ.ಡಿ ಹಸ್ತಾಂತರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
12:57 PM Feb 13, 2024 IST | Gayathri SG
ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ  ಹಸ್ತಾಂತರ

ಹುಬ್ಬಳ್ಳಿ: ತಾಲೂಕಿನ ಹೆಗ್ಗೆರಿಯ ಜಗದೀಶ ನಗರದಲ್ಲಿರುವ ಶ್ರೀ ದುರ್ಗಾದೇವಿ ಶ್ರೀ ಅಂಬಾಭವಾನಿ ದೇವಸ್ಥಾನಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದಿಂದ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 2 ಲಕ್ಷ ರೂ. ಮಂಜೂರಾಗಿದ್ದು, ಡಿ.ಡಿ ಹಸ್ತಾಂತರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

Advertisement

ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಸಂತೋಷ್‌ ಆರ್. ಶೆಟ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಪ್ರದೀಪ್ ಶೆಟ್ಟಿ ಮಂಜೂರಾದ ಡಿಡಿ ಯನ್ನು ದೇವಸ್ಥಾನದ ಟ್ರಸ್ಟಿಗಳಿಗೆ ಹಸ್ತಾಂತರಿಸಿದರು.

ಹುಬ್ಬಳ್ಳಿ ತಾಲೂಕಿನ ಯೋಜನಾಧಿಕಾರಿ ಲೀಲಾ ಮೂರ್ತಿ ಚೌಟೇ‌ರ್, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ಟ್ರಸ್ಟ್‌ನ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisement

Advertisement
Tags :
Advertisement