ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಲ್ಲಿ ಅಮಿತ್‌ ಶಾ ಎಂಟ್ರಿ : ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾತ್ರಿ ಭರ್ಜರಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದರು.
10:53 PM Apr 23, 2024 IST | Nisarga K
ಬೆಂಗಳೂರಲ್ಲಿ ಅಮಿತ್‌ ಶಾ ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾತ್ರಿ ಭರ್ಜರಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದರು.

Advertisement

ಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ಸರ್ಕಲ್‌ನಲ್ಲಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್‌ ಶೋಗೆ ಚಾಲನೆ ನೀಡಲಾಯಿತು. ವಿವೇಕಾನಂದ ಸರ್ಕಲ್‌ ಬಳಿಯಿಂದ ಸೇಂಟ್ ಫ್ರಾನ್ಸಿಸ್ ಸ್ಕೂಲ್‌ವರೆಗೆ ರೋಡ್ ಶೋ ನಡೆಯಿತು. ಸುಮಾರು ‌3 ಕಿಲೋಮೀಟರ್‌ ದೂರ ನಡೆದ ರೋಡ್‌ ಶೋ ವೀಕ್ಷಿಸಲು ಸಾವಿರಾರು ಜನರು ಆಗಮಿಸಿದ್ದರು. ರೋಡ್‌ ಶೋ ಹಿನ್ನೆಲೆ ಪ್ರಚಾರ ವಾಹನ ತೆರಳುವ ಮಾರ್ಗದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು.

ಅಮಿತ್‌ ಶಾ ಅವರಿಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷ ನಾಯಕ ಅಶೋಕ್, ಶಾಸಕರಾದ ಸತೀಶ್ ರೆಡ್ಡಿ, ಸಿ.ಕೆ ರಾಮಮೂರ್ತಿ ಸಾಥ್‌ ನೀಡಿದರು.

Advertisement

Advertisement
Tags :
AMITH SHAbengaluruELECTIONLatestNewsNewsKarnatakaRoad showTHEJASWI SOORYA
Advertisement
Next Article