For the best experience, open
https://m.newskannada.com
on your mobile browser.
Advertisement

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಗೊಂದಲಗಳಿಲ್ಲ- ಸತೀಶ್ ಕುಂಪಲ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುತ್ತೂರಿನಲ್ಲಿ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾಹಿತಿ ನೀಡಿದ್ದಾರೆ.
09:11 AM Mar 16, 2024 IST | Gayathri SG
ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಗೊಂದಲಗಳಿಲ್ಲ  ಸತೀಶ್ ಕುಂಪಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುತ್ತೂರಿನಲ್ಲಿ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾಹಿತಿ ನೀಡಿದ್ದಾರೆ.

Advertisement

ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಮತ್ತು ಲೋಕ ಸಭಾ ಚುನಾವಣೆ ಕಾರ್ಯತಂತ್ರ ಬಗ್ಗೆ ಪುತ್ತೂರಿನಲ್ಲಿ ಕಾರ್ಯಕರ್ತರು ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಅವರು ಬಳಿಕ ಮಾದ್ಯಮಗಳಿಗೆ ಮಾತನಾಡಿದರು. ಪುತ್ತೂರಿನಲ್ಲೇ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕೆನ್ನುವ ಬಿಜೆಪಿ ಪಕ್ಷದ ಕಾರ್ಯಕರ್ತರ ಆಗ್ರಹವಾಗಿದೆ. ಈ ಬಗ್ಗೆ ಕಾರ್ಯಕರ್ತರೊಂದಿಗೆ ಮತ್ತು ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿದ್ದು ಯಾವುದೇ ಗೊಂದಲಗಳಿಲ್ಲ. ಲೋಕಸಭಾ ಚುನಾವಣೆಯ ಕುರಿತು ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಚರ್ಚಿಸಲಾಯಿತು ಎಂದರು.

ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇವೆ ಮತ್ತು ಈ ಬಗ್ಗೆ ಕಾರ್ಯತಂತ್ರ ರೂಪಿಸುವ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದ ಸತೀಶ್ ಕುಂಪಲ ಪುತ್ತಿಲ ಪರಿವಾರ ಮಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ವಿಚಾರ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ , ಇದೆಲ್ಲವೂ ಮಾದ್ಯಮಗಳ ಸೃಷ್ಟಿಯಾಗಿದ್ದು ಸಭೆಯಲ್ಲಿ ಅರುಣ್ ಪುತ್ತಿಲ ಸೇರ್ಪಡೆ ವಿಚಾರವಾಗಿಯೂ ಚರ್ಚೆ ನಡೆದಿದೆ ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂದರು.

Advertisement

Advertisement
Tags :
Advertisement