For the best experience, open
https://m.newskannada.com
on your mobile browser.
Advertisement

ಪುತ್ತಿಲ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ- ಸತೀಶ್

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ಗೊಂದಲದ ಗೂಡಿನಂತೆ ಗೋಚರಿಸುತ್ತಿದೆ. ಇದೀಗ ಈ ಬಗ್ಗೆ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯೆ ನೀಡಿದ್ದಾರೆ. ಅರುಣ್ ಪುತ್ತಿಲ ಅವರು ಬೆಂಗಳೂರಿನಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆದು ಸೇರ್ಪಡೆ ಆಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
11:18 AM Mar 16, 2024 IST | Gayathri SG
ಪುತ್ತಿಲ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ  ಸತೀಶ್

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ಗೊಂದಲದ ಗೂಡಿನಂತೆ ಗೋಚರಿಸುತ್ತಿದೆ. ಇದೀಗ ಈ ಬಗ್ಗೆ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯೆ ನೀಡಿದ್ದಾರೆ. ಅರುಣ್ ಪುತ್ತಿಲ ಅವರು ಬೆಂಗಳೂರಿನಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆದು ಸೇರ್ಪಡೆ ಆಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಈಗಾಗಲೇ ಸೇರ್ಪಡೆಯಾಗಿದ್ದು, ಇನ್ನು ಮತ್ತೆ ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆಗಳು ಇಲ್ಲ ಎಂದಿದ್ದಾರೆ. ಕೆಲ ಕಾರ್ಯಕರ್ತರು ಹಾಗೂ ಕೆಲವರಲ್ಲಿ ಇಂಥಹ ಗೊಂದಲ ಇರೋದು ಸಹಜ, ಆದರೆ ರಾಜ್ಯಾಧ್ಯಕ್ಷರೇ ನಮಗೆ ಸುಪ್ರೀಂ, ಅವರ ಸೂಚನೆಯಂತೆ ಪುತ್ತಿಲ ಇರ್ತಾರೆ ಎಂದರು.

ಅರುಣ್ ಪುತ್ತಿಲ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಪುತ್ತಿಲ ಕೂಡ ಒಪ್ಪಿದ್ದಾರೆ. ಪುತ್ತಿಲ ಪರಿವಾರ ವಿಸರ್ಜನೆ ಮಾಡಿಕೊಂಡೇ ಬಿಜೆಪಿಯಲ್ಲೇ ಕೆಲಸ ಮಾಡ್ತಾರೆ.

Advertisement

ಇನ್ನೂ ಈ ಬಗ್ಗೆ ಪುತ್ತೂರು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಪುತ್ತಿಲ ಪಕ್ಷೇತರ ಸ್ಪರ್ಧೆ ವೇಳೆ ಹಲವು ಸಂಘರ್ಷ ಆಗಿದೆ. ಈ ವಿಚಾರದಲ್ಲಿ ಸರಿ ಪಡಿಸೋ ಕೆಲಸ ಆಗ್ತಿದೆ, ಬಹುತೇಕ ಸರಿಯಾಗಿದೆ. ಸಣ್ಣ ಸಣ್ಣ ಗೊಂದಲಗಳು‌ ಇರೋದು ಸಹಜ, ಸರಿಪಡಿಸಲಾಗಿದೆ. ಆದರೆ ಪುತ್ತಿಲ ಬಿಜೆಪಿಗೆ‌ ಬರಬಾರದು ಅಂತ ಯಾರೂ ಹೇಳಿಲ್ಲ ಎಂದರು.

ರಾಜ್ಯಾಧ್ಯಕ್ಷರ ಎದುರುಗಡೆ ಸಹಮತ ವ್ಯಕ್ತಪಡಿಸಿ ಪುತ್ತಿಲ ಬಂದಿದ್ದಾರೆ. ಹೀಗಿರುವಾಗ ಮತ್ತೆ ಧ್ವಜ ಕೊಟ್ಟು ಸ್ವಾಗತ ಮಾಡಬೇಕು ಅಂತೇನಿಲ್ಲ. ರಾಜ್ಯಾಧ್ಯಕ್ಷರಿಗಿಂತ ನಾವು ದೊಡ್ಡವರಲ್ಲ, ಅವರು ಹೇಳಿದ ಮೇಲೆ ಮುಗೀತು. ಅರುಣ್ ಪುತ್ತಿಲ ಬಿಜೆಪಿ ಜೊತೆ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

Advertisement
Tags :
Advertisement