ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಂದೆಯೇ ಮಗುವನ್ನು ಗೋಡೆಗೆ ಎಸೆದಿದ್ದ ಪ್ರಕರಣ - ಚಿಕಿತ್ಸೆ ಫಲಿಸದೇ ಮಗು ಸಾವು

ಅಳುತ್ತದೆ ಎಂದು ಮಗುವನ್ನು ಗೋಡೆಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮಗು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
10:01 PM Feb 29, 2024 IST | Gayathri SG

ಹುಬ್ಬಳ್ಳಿ: ಅಳುತ್ತದೆ ಎಂದು ಮಗುವನ್ನು ಗೋಡೆಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮಗು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.

Advertisement

ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿದೆ. ಮಗು ಅಳುತ್ತಿದ್ದರಿಂದ ನಿದ್ದೆಗೆ ಭಂಗ ಬರುತ್ತಿದೆ ಅಂತ ಪಾಪಿ ತಂದೆ ಶಂಭುಲಿಂಗಯ್ಯ ಶಾಪುರಮಠ ಕೋಪಗೊಂಡಿದ್ದ. ಬಳಿಕ ಒಂದು ವರ್ಷದ ಶ್ರೇಯಾ ಎಂಬುವ ಮಗುವನ್ನು ಗೋಡೆಗೆ ಎಸಿದಿದ್ದ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪಾಪಿ ತಂದೆಗೆ ಕಠಿಣ ಶಿಕ್ಷೆ ವಿಧಿಸುವಂತೆ ಪತ್ನಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Advertisement

Advertisement
Tags :
BreakingNewsLatestNewsNewsKannadaಮಗುಹುಬ್ಬಳ್ಳಿ
Advertisement
Next Article