ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ಬಜರಂಗದಳ ಕಿಡಿ!
ಮಂಗಳೂರು: ಗೃಹ ಸಚಿವನಾಗಿದ್ದಾಗ ಬಜರಂಗದಳ ದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಆರ್ ಅಶೋಕ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಆಕ್ರೋಶ ಹೊರಹಾಕಿದೆ.
ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗೆ ಬಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ್ ಪುನೀತ್ ಅತ್ತಾವರ ತನ್ನ ಫೇಸ್ ಬುಕ್ ಖಾತೆಯಲ್ಲಿ ಆರ್.ಅಶೋಕ್ ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ಅಧಿವೇಶನದಲ್ಲಿ ಮಂಗಳೂರು ಪಬ್ ದಾಳಿ ಬಗ್ಗೆ ಮಾತನಾಡಿದ್ದ ಅಶೋಕ್ಆವತ್ತುಬಜರಂಗದಳ ದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿದರು. ಈಗಿನ ಗೃಹ ಸಚಿವ ಪರಮೇಶ್ವರ್ ಗೆ ಬುದ್ದಿ ಹೇಳೋ ಭರದಲ್ಲಿ ಹೇಳಿದ್ದ ಅಶೋಕ್, ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ ಬಜರಂಗದಳ ದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದಿದ್ದಾರೆ.
ಆದರೆ ಸದ್ಯ ಅಶೋಕ್ ಹೇಳಿಕೆ ವಿರುದ್ದ ಕರಾವಳಿ ಭಜರಂಗದಳ ಕೆಂಡಕಾರಿದ್ದಾರೆ. 'ನೀವು ಆರ್ ಅಶೋಕ್ ಅಲ್ಲ. ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ.' 'ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ' 'ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ' 'ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ'. 'ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. 'ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಫೇಸ್ ಬುಕ್ ನಲ್ಲಿ ಭಜರಂಗದಳ ಮುಖಂಡ ಆರ್.ಅಶೋಕ್ ಗೆ ಎಚ್ಚರಿಕೆ ನೀಡಿದ್ದಾರೆ.