ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಂಟ್ವಾಳ ಬಿಜೆಪಿ ಶಾಸಕರಿಗೆ ಡಿಕ್ಕಿಯಾಗಿ ಪರಾರಿಯಾದ ಕಾರು

ಬಿಜೆಪಿ ಶಾಸಕರಿಗೆ ಕಾರೊಂದು ಡಿಕ್ಕಿಯಾಗಿ ಪಲಾಯನಗೊಂಡ ಘಟನೆ ಇಂದು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ನಡೆದಿದೆ.
05:49 PM Jan 14, 2024 IST | Ashika S

ಬಂಟ್ವಾಳ: ಬಿಜೆಪಿ ಶಾಸಕರಿಗೆ ಕಾರೊಂದು ಡಿಕ್ಕಿಯಾಗಿ ಪಲಾಯನಗೊಂಡ ಘಟನೆ ಇಂದು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ನಡೆದಿದೆ.

Advertisement

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರು ಡಿಕ್ಕಿಯಾಗಿದೆ. ಶಾಸಕ ರಾಜೇಶ್ ನಾಯ್ಕ್ ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ವಾಪಾಸ್ ಆಗ್ತಿದ್ದರು. ಇಂದು ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಘಟನೆ ಸಂಭವಿಸಿದೆ. ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಶಾಸಕರಿಗೆ ಢಿಕ್ಕಿಯಾಗಿ ಪರಾರಿಯಾಗಿದೆ.

ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್ ನಾಯ್ಕ್ ಗೆ ಗಾಯವಾಗಿದ್ದು, ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ಶಾಸಕರು ಪಾರಾಗಿದ್ದಾರೆ. ಸದ್ಯ ಚಿಕಿತ್ಸೆ ಪಡೆದುಕೊಂಡ ಶಾಸಕ ರಾಜೇಶ್ ನಾಯ್ಕ್ ಮನೆಗೆ ವಾಪಾಸ್ ಆಗಿದ್ದಾರೆ.

Advertisement

ಇತ್ತ ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಹಿಡಿದು ಬಜ್ಪೆ ಪೋಲೀಸರಿಗೆ ಒಪ್ಪಿಸಿದ್ದಾರೆ. ಕಾರು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement
Tags :
LatetsNewsNewsKannadaಎಡಪದವುಡಿಕ್ಕಿಪಲಾಯನಬಿಜೆಪಿಮಂಗಳೂರುಶಾಸಕ
Advertisement
Next Article