ಬಸವಣ್ಣ ರಾಜ್ಯದ ‘ಸಾಂಸ್ಕೃತಿಕ ನಾಯಕ’: ರಾಜ್ಯ ಘೋಷಣೆ
ಕ್ರಾಂತಿಯೋಗಿ ಬಸವಣ್ಣ ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದೆ.
12:47 PM Jan 19, 2024 IST
|
Ramya Bolantoor
ಬೆಂಗಳೂರು: ಕ್ರಾಂತಿಯೋಗಿ ಬಸವಣ್ಣ ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣ ಅವರಿಗೆ ಸಾಂಸ್ಕೃತಿಕ ಸ್ಥಾನಮಾನ ನೀಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ
Advertisement
ಮಹಾರಾಷ್ಟ್ರ ಸರ್ಕಾರ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಾಂಸ್ಕೃತಿಕ ನಾಯಕನೆಂದು ಅಧಿಕೃತ ಮುದ್ರೆಯೊತ್ತಿದೆ. ಇದೀಗ ಬಸವೇಶ್ವರರಿಗೆ ಸಾಂಸ್ಕೃತಿಕ ನಾಯಕನೆಂದು ಸಾರಿದ ಕರ್ನಾಟಕ ಎರಡನೇ ರಾಜ್ಯವಾಗಿದೆ.
ಸಬೆಯ ಬಳಿಕ ಸಚಿವ ಈಶ್ವರಖಂಡ್ರೆ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಮಠಾಧೀಶರು, ಸಮುದಾಯದ ಗಣ್ಯರು, ಸಚಿವ, ಶಾಸಕರು, ಬಸವೇಶ್ವರರ ವಿಚಾರಧಾರೆ ಬಲ್ಲವರು ಹಾಗೂ ಅನುಯಾಯಿಗಳ ಅಪೇಕ್ಷೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ ಎಂದು ಹೇಳಿದರು.
Advertisement
Advertisement
Next Article