ಬೆಂಗಳೂರು ಐವರು ಶಂಕಿತ ಉಗ್ರರ ಬಂಧನ ಪ್ರಕರಣ ಎನ್ಐಎಗೆ ವರ್ಗಾಯಿಸಿದ ಸಿಸಿಬಿ
ನಗರದಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ ರಾಷ್ಟ್ರೀಯ ತನಿಖಾ ದಳಗೆ ವರ್ಗಾವಣೆ ಮಾಡಿದೆ.
09:53 AM Nov 02, 2023 IST
|
Ramya Bolantoor
ಬೆಂಗಳೂರು: ನಗರದಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ ರಾಷ್ಟ್ರೀಯ ತನಿಖಾ ದಳಗೆ ವರ್ಗಾವಣೆ ಮಾಡಿದೆ. ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್ ಬಂಧಿತ ಶಂಕಿತ ಉಗ್ರರು. ಸದ್ಯ ಎನ್ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ.
Advertisement
ಇನ್ನು ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಐವರು ಶಂಕಿತ ಉಗ್ರರು ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು. ಶಂಕಿತ ಉಗ್ರ ನಾಸೀರ್ ಜೈಲಿನಲ್ಲಿದ್ದುಕೊಂಡೆ ಈ ಐವರು ಶಂಕಿತ ಉಗ್ರರ ಬ್ರೈನ್ ವಾಶ್ ಮಾಡಿದ್ದನು. ಈ ಎಲ್ಲ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.
Advertisement
Advertisement
Next Article