ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು: ಭವಾನಿ ರೇವಣ್ಣ ಅವಾಚ್ಯ ನಿಂದನೆ ವೈರಲ್‌

ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
07:37 AM Dec 04, 2023 IST | Ashika S

ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Advertisement

ಭಾನುವಾರ (ಡಿಸೆಂಬರ್‌3) ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ ಭವಾನಿ ರೇವಣ್ಣ ಅವರು ಬೈಕ್‌ ಸವಾರನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ.

ಭವಾನಿ ಅವರು ಕಾರಿನಿಂದ ಕೆಳಗಿಳಿದು ಬಂದು ಬೈಕ್ ಸವಾರ ಆರೋಗ್ಯ ವಿಚಾರಿಸಲಿಲ್ಲ. ಹಿಗ್ಗಾಮುಗ್ಗಾ ಬೈದದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ಟು ಹಾಕ್ರೋ ಈ ಗಾಡಿನ ಎಂದು ಬೈಕ್‌ ಸವಾರನಿಗೆ ತರಾಟೆಗೆ ತೆಗೆದುಕೊಂಡರು.

Advertisement

ವಾಹನದ ಮುಂಭಾಗ ಡ್ಯಾಮೇಜ್‌ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್‌ ಸವಾರನ ಮೊಬೈಲ್‌ ಕಸಿದುಕೊಂಡು ಬೈಕ್‌ ಕೀ ಕಿತ್ತುಕೊಂಡರು. " ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್‌ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

" ಅವನು (ಬೈಕ್‌ ಸವಾರ) ಸತ್ತೋಯ್ತಾನೆ ಅಂತ ಅವನ ಬಗ್ಗೆ ಯೋಚೆ ಮಾಡ್ತಾ ಇದ್ದೀಯಲ್ಲಾ, ಒಂದೂವರೆ ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?’ ಎಂದೂ ಸ್ಥಳೀಯರ ವಿರುದ್ಧ ಭವಾನಿ ರೇವಣ್ಣ ಕೆಂಡಾಮಂಡಲವಾದರು.

‘ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು.

Advertisement
Tags :
LatetsNewsNewsKannadaಜೆಡಿಎಸ್ಡಿಕ್ಕಿತರಾಟೆನಾಯಕಬೈಕ್ಭವಾನಿ ರೇವಣ್ಣವಿಡಿಯೋಸಾಮಾಜಿಕ ಜಾಲತಾಣ
Advertisement
Next Article