ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಕರ್ತವ್ಯ ನಿರತ ಶಿರಸ್ತೇದಾರ್ ಗೆ ಕಚೇರಿಯಲ್ಲೇ ಚೂರಿ ಇರಿತ

ಕರ್ತವ್ಯ ನಿರತ ಶಿರಸ್ತೇದಾರ್ ಮೇಲೆ ವ್ಯಕ್ತಿಯೊಬ್ಬ ಕಚೇರಿಯಲ್ಲೇ ಚಾಕು ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಗುರುವಾರ ನಡೆದಿದೆ. ಬೀದರ್ ತಹಶೀಲ್ದಾರ್ ಕಚೇರಿಯಲ್ಲೇ ಹಾಡಹಗಲಲ್ಲೇ ಘಟನೆ ನಡೆದಿದ್ದ,
05:35 PM Jul 11, 2024 IST | Ashitha S

ಬೀದರ್ : ಕರ್ತವ್ಯ ನಿರತ ಶಿರಸ್ತೇದಾರ್ ಮೇಲೆ ವ್ಯಕ್ತಿಯೊಬ್ಬ ಕಚೇರಿಯಲ್ಲೇ ಚಾಕು ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಗುರುವಾರ ನಡೆದಿದೆ. ಬೀದರ್ ತಹಶೀಲ್ದಾರ್ ಕಚೇರಿಯಲ್ಲೇ ಹಾಡಹಗಲಲ್ಲೇ ಘಟನೆ ನಡೆದಿದ್ದು, ಆಹಾರ ಶಾಖೆಯ ಅನಿಲ್ ಕುಮಾರ್ ಮೇಲೆ ಮರಣಾಂತಿಕ ಹಲ್ಲೆ ಮಾಡಿ ದುಷ್ಕರ್ಮಿ ಪರಾರಿಯಾಗಿದ್ದಾನೆ.

Advertisement

ಘಟನೆ ಬಳಿಕ ಕಚೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿ ವಿಲೇವಾರಿ ಆಗದ ಹಿನ್ನಲೆ‌ ಕೋಪಗೊಂಡು ದುಷ್ಕೃತ್ಯ ನಡೆಸಿದ್ದಾನೆ‌ ಎನ್ನಲಾಗಿದೆ. ಗಾಯಾಳು ಅನಿಲ್ ಕುಮಾರ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಹಶೀಲ್ದಾರ್ ಅವರು ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Tags :
CrimeKnife stabbingLATEST NEWSNews KarnatakaPoliceTODAY
Advertisement
Next Article