ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್
ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದ್ದಾರೆ.
06:47 PM May 04, 2024 IST | Ashika S
ಬೆಂಗಳೂರು: ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದ್ದಾರೆ.
Advertisement
ಈಗ ಅವರ ಮೇಲೆ ಬಯೋಪಿಕ್ ಮಾಡಲು ತಮಿಳು ಚಿತ್ರರಂಗದಲ್ಲಿ ಸಿದ್ಧತೆ ನಡೆದಿದೆ ಎಂದು ವರದಿ ಆಗಿದೆ. ವಿಶೇಷ ಎಂದರೆ ತಮಿಳು ನಟ ವಿಶಾಲ್ ಅವರು ಈ ಪಾತ್ರ ಮಾಡಲಿದ್ದಾರಂತೆ. ಸದ್ಯ ಎಲ್ಲವೂ ಆರಂಭ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಫೈನಲ್ ಆಗಲಿದೆಯಂತೆ. ಅಣ್ಣಾಮಲೈ ಪಾತ್ರಕ್ಕೆ ವಿಶಾಲ್ ಸಾಕಷ್ಟು ಹೊಂದಿಕೆ ಆಗುತ್ತಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
ಕರೂರಿನ ಮೂಲದ ಅಣ್ಣಾಮಲೈ ಅವರು ಕೃಷಿ ಹಿನ್ನೆಲೆಯಿಂದ ಬಂದವರು. ಅವರು ಐಪಿಎಸ್ ಅಧಿಕಾರಿಯಾಗಿ ಆಯ್ಕೆ ಆದರು. ಅವರು ಕರ್ನಾಟಕದಲ್ಲಿ ಸೇವೆ ಸಲ್ಲಿಸಿ, ಸಿಂಘಂ ಎಂದೇ ಫೇಮಸ್ ಆದರು. ಆ ಬಳಿಕ ಅವರು ತಮ್ಮ ಪೋಸ್ಟ್ನಿಂದ ನಿವೃತ್ತಿ ಪಡೆದರು. 2020ರಲ್ಲಿ ಅವರು ಬಿಜೆಪಿ ಸೇರಿದರು. ಅವರು ತಮಿಳುನಾಡು ಬಿಜೆಪಿಯ ಅಧ್ಯಕ್ಷರಾದರು.
Advertisement
Advertisement