ಲೋಕಸಭಾ ಚುನಾವಣೆಗೂ ಮೊದಲೇ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು
ಸೂರತ್: ಲೋಕಸಭಾ ಚುನಾವಣೆ ಪ್ರಚಾರ ನಡೆಯುತ್ತಿದೆ.ಮೊದಲ ಹಂತದ ಚುನಾವಣೆ ಮುಗಿದಿದ್ದು, ಇನ್ನೂ 6 ಹಂತದ ಚುನಾವಣೆ ಬಾಕಿ ಇದೆ. ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ನಡುವೆ ವಾಕ್ಸಮರ ಹೆಚ್ಚಾಗಿದೆ.
ಮೊದಲ ಹಂತದ ಚುನಾವಣೆಯಲ್ಲಿ ಜನ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಬಿಜೆಪಿ ಹೇಳಿಕೊಂಡರೆ, ಇಂಡಿಯಾ ಒಕ್ಕೂಟ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ ಚುನಾವಣಾ ಫಲಿತಾಂಶಕ್ಕೂ ಮೊದಲೇ ಬಿಜೆಪಿ ಭರ್ಜರಿ ಗೆಲುವು ಸಿಕ್ಕಿದೆ. ಸೂರತ್ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೂರತ್ ಕ್ಷೇತ್ರದಿಂದ ಒಟ್ಟು 9 ಅಭ್ಯರ್ಥಿಗಳು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಈ ಬೈಕಿ ಬಿಜೆಪಿಯಿಂದ ಮುಕೇಶ್ ದಲಾಲ್ ಹಾಗೂ ಕಾಂಗ್ರೆಸ್ನಿಂದ ನಿಲೇಶ್ ಕುಂಭಾನಿ ಪ್ರಮುಖರಾಗಿದ್ದರು. ಇವರಿಬ್ಬರ ನಡುವೆ ನೇರಾನೇರ ಸ್ಪರ್ಧೆ ಎರ್ಪಟ್ಟಿತ್ತು.
ಆದರೆ ನಿಲೇಶ್ ಕುಂಭಾನಿ ನಾಮಪತ್ರ ತರಿಸ್ಕೃತಗೊಂಡಿತ್ತು. ಸಹಿ ಮಿಸ್ಮ್ಯಾಚ್ ಸೇರಿದಂತೆ ಇತರ ಕೆಲ ಕಾರಣದಿಂದ ನಿಲೇಶ್ ಕುಂಭಾನಿ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು.
ನಿಲೇಶ್ ಕುಂಭಾನಿ ಜೊತೆಗೆ ಇತರ 8 ಅಭ್ಯರ್ಥಿಗಳು ನಾಪತ್ರ ಸಲ್ಲಿಸಿದ್ದರು. ಇವರೆಲ್ಲರ ನಾಮಪತ್ರವನ್ನು ಚುನಾವಣಾ ಆಯೋಗ ಪುರಸ್ಕರಿಸಿತ್ತು. ಆದರೆ ಎಂಟೂ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಹೀಗಾಗಿ ಕಣದಲ್ಲಿ ಬಿಜೆಪಿಯ ಮುಕೇಶ್ ದಲಾಲ್ ಒಬ್ಬರೆ ಸ್ಪರ್ಧೆಯಲ್ಲಿದ್ದರು. ನಾಮಪತ್ರ ಪರಿಶೀಲನೆ ಬಳಿಕ ಮುಕೇಶ್ ದಲಾಲ್ ಒಬ್ಬರೇ ಕಣದಲ್ಲಿರುವ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
આપણા નરેન્દ્રભાઈને ફરી પ્રધાનમંત્રી બનાવવા સુરતે અર્પણ કર્યું પ્રથમ કમળ...
સુરત લોકસભા બેઠકના ઉમેદવાર શ્રી @mukeshdalal568 ને બિનહરીફ ચૂંટાવવા બદલ પ્રદેશ અધ્યક્ષ શ્રી @CRPaatil એ અભિનંદન પાઠવ્યા. #PhirEKBarModiSarkar#AbkiBar400Par pic.twitter.com/TanHMnFR1v
— BJP Gujarat (@BJP4Gujarat) April 22, 2024