ಹ್ಯಾಟ್ರಿಕ್ ಹೀರೋ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ
ಬೆಂಗಳೂರು: ಚಲನಚಿತ್ರ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕಾಂಗ್ರೆಸ್ ಪಕ್ಷದ ಪರ ಶಿವರಾಜ್ ಕುಮಾರ್ ಪ್ರಚಾರ ಕೈಗೊಳ್ಳುತ್ತಿರುವ ಹಿನ್ನೆಲೆ ನಟನ ವಿರುದ್ಧ ದೂರು ನೀಡಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಶಿವರಾಜಕುಮಾರ್ ಕುಮಾರ್ ಅಭಿನಯದ ಸಿನಿಮಾ, ಜಾಹೀರಾತುಗಳನ್ನು ನಿಷೇಧಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿ ರಾಜ್ಯ ಒಬಿಸಿ ಮೋರ್ಛಾದಿಂದ ಇ-ಮೇಲ್ ಮೂಲಕ ದೂರು ಸಲ್ಲಿಸಲಾಗಿದೆ. ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಕಾಂಗ್ರೆಸ್ ಚಟುವಟಿಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದು ಅವರ ಪತ್ನಿಗೆ ಬೆಂಬಲವಾಗಿ ನಿಂತಿದ್ದಾರೆ ನಟ.
ಇತ್ತೀಚೆಗೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಲೋಕಸಭೆ ಚುನಾವಣೆ ಸಿದ್ಧತೆ ನಡೆಯುತ್ತಿದೆ. ಯಾವಾಗಿಂದ ಚುನಾವಣಾ ಪ್ರಚಾರಕ್ಕೆ ಹೋಗಬೇಕು ಅನ್ನೋದು ತೀರ್ಮಾನ ಆಗಿಲ್ಲ. ಯಾವಾಗ ಹೋಗಬೇಕು ಅಂತ ಕರೆ ಬರುತ್ತೋ ಆಗ ಹೋಗ್ತಿನಿ. ಈ ಬಾರಿ ಪೂರ್ತಿ ಚುನಾವಣೆಯಲ್ಲಿ ತೊಡಗಿಸಿಕೊಳ್ಳುತ್ತೇವೆ. ಪತ್ನಿ ಸಂಸದೆ ಆಗೋಕೆ ಚುನಾವಣೆಗೆ ಬಂದಿರೋದು ಎಂದು ಹೇಳಿದ್ದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡಿರುವ ಗೀತಾ ಶಿವರಾಜ್ಕುಮಾರ್ ಶಿವಮೊಗ್ಗದಲ್ಲಿ ಅಖಾಡಕ್ಕೆ ಇಳೀತಿದ್ದಾರೆ.