ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.
06:41 AM Apr 29, 2024 IST
|
Ashika S
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.
Advertisement
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ನಿನ್ನೆ ಮಧ್ಯರಾತ್ರಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
Advertisement
ಶ್ರೀನಿವಾಸಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್.
Advertisement
Next Article