ನಾಳೆ ಸಂಜೆಯೊಳಗೆ ನಿಗಮ ಮಂಡಳಿ ನೇಮಕ ಸಾಧ್ಯತೆ
ನಿಗಮ ಮಂಡಳಿ ನೇಮಕ ಸಂಬಂಧ ಶನಿವಾರ ಸಂಜೆಯೊಳಗೆ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ನಾಯಕರ ಜತೆ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಿದ್ದರು.
06:47 PM Dec 01, 2023 IST
|
Ashika S
ಬೆಂಗಳೂರು: ನಿಗಮ ಮಂಡಳಿ ನೇಮಕ ಸಂಬಂಧ ಶನಿವಾರ ಸಂಜೆಯೊಳಗೆ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.
Advertisement
ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ನಾಯಕರ ಜತೆ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಿದ್ದರು.
ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, ನಿಗಮ ಮಂಡಳಿ ನೇಮಕಕ್ಕೆ ಸಂಬಂಧಿಸಿದ ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸಲಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದರು.
Advertisement
25 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ವಿಧಾನಪರಿಷತ್ನ 4 ಅಥವಾ 5 ಸದಸ್ಯರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.
Advertisement
Next Article