For the best experience, open
https://m.newskannada.com
on your mobile browser.
Advertisement

ಕೇರಳ ಸರ್ಕಾರ ಸಚಿವಾಲಯಕ್ಕೆ ಬಾಂಬ್‌ ಬೆದರಿಕೆ ಕರೆ

ಕೆಲದಿನಗಳ ಹಿಂದೆ ತಮಿಳುನಾಡು ರಾಜ್ಯಪಾಲರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆದಿತ್ತು
02:47 PM Nov 09, 2023 IST | Ramya Bolantoor
ಕೇರಳ ಸರ್ಕಾರ ಸಚಿವಾಲಯಕ್ಕೆ ಬಾಂಬ್‌ ಬೆದರಿಕೆ ಕರೆ

ಕೇರಳ : ಕೆಲದಿನಗಳ ಹಿಂದೆ ತಮಿಳುನಾಡು ರಾಜ್ಯಪಾಲರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆದಿತ್ತು. ಇದೀಗ ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ಹೇಳಿದ್ದಾರೆ. ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ವಿವರಿಸಿದೆ.

Advertisement

Advertisement
Tags :
Advertisement