ಕೇರಳ ಸರ್ಕಾರ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಕರೆ
ಕೆಲದಿನಗಳ ಹಿಂದೆ ತಮಿಳುನಾಡು ರಾಜ್ಯಪಾಲರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿತ್ತು
02:47 PM Nov 09, 2023 IST
|
Ramya Bolantoor
ಕೇರಳ : ಕೆಲದಿನಗಳ ಹಿಂದೆ ತಮಿಳುನಾಡು ರಾಜ್ಯಪಾಲರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿತ್ತು. ಇದೀಗ ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ಹೇಳಿದ್ದಾರೆ. ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ವಿವರಿಸಿದೆ.
Advertisement
Advertisement
Next Article