ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೈಕ್‍ನಿಂದ ಬಿದ್ದವನ ಮೇಲೆ ಬಸ್ ಹರಿದು ಮೃತಪಟ್ಟಿದ್ದಾನೆ: ಶೋಭಾ ಕರಂದ್ಲಾಜೆ

ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆಗೆ ತಿಕ್ರಿಯಿಸಿದ ಅವರು,  ಕಾರಿನ ಡೋರ್ ಓಪನ್ ಮಾಡುವಾಗ ನಮ್ಮ ಕಾರ್ಯಕರ್ತ ಹಿಂದಿನಿಂದ ಬಂದು ಗುದ್ದಿದ್ದಾನೆ. ಬಳಿಕ ಬೈಕ್‍ನಿಂದ ಬಿದ್ದವನ ಮೇಲೆ ಬಸ್ ಹರಿದಿದೆ ಎಂದು ಹೇಳಿದ್ದಾರೆ. 
03:22 PM Apr 08, 2024 IST | Ashika S

ಬೆಂಗಳೂರು: ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆಗೆ ತಿಕ್ರಿಯಿಸಿದ ಅವರು,  ಕಾರಿನ ಡೋರ್ ಓಪನ್ ಮಾಡುವಾಗ ನಮ್ಮ ಕಾರ್ಯಕರ್ತ ಹಿಂದಿನಿಂದ ಬಂದು ಗುದ್ದಿದ್ದಾನೆ. ಬಳಿಕ ಬೈಕ್‍ನಿಂದ ಬಿದ್ದವನ ಮೇಲೆ ಬಸ್ ಹರಿದಿದೆ ಎಂದು ಹೇಳಿದ್ದಾರೆ.

Advertisement

ಇವತ್ತು ನಮ್ಮ ಪಕ್ಷದ ರ‍್ಯಾಲಿ ಇತ್ತು. ಎಲ್ಲರೂ ರ‍್ಯಾಲಿ ಮುಗಿಸಿಕೊಂಡು ಬರುವಾಗ ಕೆಆರ್ ಪುರಂ ಸರ್ಕಲ್ ಬಳಿ ಕಾರು ನಿಲ್ಲಿಸಿದ್ವಿ. ನಮ್ಮ ಕಾರ್ಯಕರ್ತ ಹಿಂಬದಿಯಿಂದ ಬಂದು ಗುದ್ದಿಕೊಂಡಿದ್ದಾನೆ. ಕಾರ್ ನಮ್ಮದೇ, ಡೋರ್ ತೆಗೆದಾಗ ಬಿದ್ದಿದ್ದಾರೆ. ನಂತರ ಅವರ ಮೇಲೆ ಬಸ್ ಹರಿದಿದೆ.

ಪೋಸ್ಟ್ ಮಾರ್ಟಮ್ ವರದಿ ಬಂದ ನಂತರ ಎಲ್ಲವೂ ತಿಳಿಯುತ್ತೆ ಎಂದು ಶೋಭಾ ಹೇಳಿದರು.

Advertisement

ಪ್ರಕಾಶ್ ಸಾವು ಸಂಭವಿಸಿರೋದು ನಿಜಕ್ಕೂ ದುರ್ದೈವ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ನಾವು ಅವರ ಕುಟುಂಬಕ್ಕೆ ಏನು ಸಹಾಯ ಮಾಡಬೇಕೋ ಮಾಡ್ತೀವಿ. ಅವರ ಕುಟುಂಬದ ಜೊತೆಗೆ ನಾವೀದ್ದೇವೆ. ಅಲ್ಲದೇ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಮ್ಮ ಪಕ್ಷ ನಿರ್ಧರಿಸುತ್ತೆ ಎಂದು ಹೇಳಿದರು.

Advertisement
Tags :
BUSLatetsNewsManNewsKarnatakaSHOBHA KARANDLAJE
Advertisement
Next Article