For the best experience, open
https://m.newskannada.com
on your mobile browser.
Advertisement

ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ: ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.
08:18 AM Apr 13, 2024 IST | Ashika S
ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ  ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

Advertisement

ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್‌ ಮತೀನ್‌ ತಾಹ, ಮುಸಾವಿರ್‌  ಹುಸೇನ್‌ನನ್ನು ಎನ್‌ಐಎ ಪೊಲೀಸರು ಕರೆತಂದಿದ್ದಾರೆ.

ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್‌, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು.

Advertisement

ಇಂದು ಬೆಳಗ್ಗೆ 10 ಗಂಟೆಗೆ ಎನ್‌ಐಎ ವಿಶೇಷ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.

ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ.

Advertisement
Tags :
Advertisement