For the best experience, open
https://m.newskannada.com
on your mobile browser.
Advertisement

ಲೋಕಸಭೆ ಸ್ಪರ್ಧೆಗೆ ಅವಕಾಶ ಸಿಕ್ಕಿದಲ್ಲಿ ವಿರೋಧವಿಲ್ಲ: ಚಕ್ರವರ್ತಿ ಸೂಲಿಬೆಲೆ

ಭಾರತವನ್ನು ಶ್ರೇಷ್ಠ ಭಾರತವನ್ನಾಗಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ನಮೋ ಭಾರತ್ ತಂಡದಿಂದ ವಿಶೇಷ ಕಾರ್ಯಕ್ರಮ ಇಂದು(ಮಾ.14) ನಡೆಯಿತು.
09:47 PM Mar 14, 2024 IST | Ashika S
ಲೋಕಸಭೆ ಸ್ಪರ್ಧೆಗೆ ಅವಕಾಶ ಸಿಕ್ಕಿದಲ್ಲಿ ವಿರೋಧವಿಲ್ಲ  ಚಕ್ರವರ್ತಿ ಸೂಲಿಬೆಲೆ

ಪುತ್ತೂರು: ಭಾರತವನ್ನು ಶ್ರೇಷ್ಠ ಭಾರತವನ್ನಾಗಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ನಮೋ ಭಾರತ್ ತಂಡದಿಂದ ವಿಶೇಷ ಕಾರ್ಯಕ್ರಮ ಇಂದು(ಮಾ.14) ನಡೆಯಿತು.

Advertisement

ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯಲಿರುವ ಜಿಲ್ಲೆಯ ಪ್ರಥಮ ಕಾರ್ಯಕ್ರಮದಲ್ಲಿ ನಮೋ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಸೂಲಿಬೆಲೆ ಪುತ್ತೂರು ಸೀಮೆಯ ಅಧಿಪತಿ ಶ್ರೀ ಮಹಾಲಿಂಗೇಶ್ವರನ ಸನ್ನಿಧಿಗೆ ತೆರಳಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರ ವದಂತಿಯಷ್ಟೇ. 2014, 2019 ರಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂತಹ ಅವಕಾಶ ಬಂದರೆ ವಿರೋಧ ಇಲ್ಲ ಎಂದು ಹೇಳಿದರು.

Advertisement

Advertisement
Tags :
Advertisement