ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು
ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಸುಮಾರು 20 ಮಂದಿ ಅಟ್ಯಾಕ್ ಮಾಡಿದ್ದಾರೆ. ಮದರ್ಸ್ ಡೇ ಪ್ರಯುಕ್ತ ತಮ್ಮ ತಾಯಿಯನ್ನು ಚೇತನ್ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದರು. ವಾಪಸ್ ಬರುವಾಗ ಚೇತನ್ ಮೇಲೆ 20 ಮಂದಿ ಹಲ್ಲೆ ಮಾಡಿದ್ದಾರೆ ಅಂತ ನಟನೇ ಆರೋಪಿಸಿದ್ದಾರೆ. ನಂತರ ಘಟನೆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
‘ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’
ಇನ್ಸ್ಟಾಗ್ರಾಮ್ ಲೈವ್ ಬಂದು ಚೇತನ್ ಚಂದ್ರ ಹೇಳಿದ್ದಾರೆ.