ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ
ಸಿಟಿ ಬಸ್ ಚಾಲಕ ಇಂದು ನಸುಕಿನ ಜಾವ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
01:58 PM Dec 19, 2023 IST
|
Ramya Bolantoor
Tags :
ಉಳ್ಳಾಲ: ಸಿಟಿ ಬಸ್ ಚಾಲಕ ಇಂದು ನಸುಕಿನ ಜಾವ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
Advertisement
ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಆತ್ಮಹತ್ಯೆ ಮಾಡಿಕೊಂಡವರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದರು.
ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪಸ್೯ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.
Advertisement
Advertisement
Advertisement
Next Article