ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಲ್ಪ ಸಂಖ್ಯಾತರಿಗಾಗಿ 1 ಸಾವಿರ ಕೋಟಿ ರೂ.ಗಳ ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶುಕ್ರವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿ ಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.
12:30 PM Dec 30, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶುಕ್ರವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿ ಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

Advertisement

ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ತಯಾರಿಸಬೇಕು. ಈ ವೇಳೆ ಅಲ್ಪಸಂಖ್ಯಾತರು ಹೆಚ್ಚಾಗಿನೆಲೆಸಿರುವ ಹಾಗೂಮೂಲಸೌಕರ್ಯ ಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.

ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಈ ಹಿನ್ನೆ ಲೆಯಲ್ಲಿ ರಾಜ್ಯ ಸರ್ಕಾರವೇ ಕೇಂದ್ರದ ಪಾಲನ್ನೂ ಭರಿಸಲು ತೀರ್ಮಾನಿಸಿದೆ. ಪ್ರಸ್ತುತ 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದ್ದು, ಬಜೆಟ್ಟಲ್ಲಿ 60 ಕೋಟಿ ರು. ನಿಗದಿಯಾಗಿದೆ. ಕೇಂದ್ರದ ಪಾಲನ್ನೂ ಭರಿಸಬೇಕಿರುವ ಹಿನ್ನೆಲೆಯಲ್ಲಿ ಇಲಾಖಾ ಅನುದಾನದ ಮರು ಹಂಚುವ ಮೂಲಕ 40 ಕೋಟಿ ರು. ಹೆಚ್ಚುವರಿ ಹಣ ವನ್ನೂ ವಿದ್ಯಾರ್ಥಿವೇತನಕ್ಕೆ ಬಳಕೆ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚಿಸಿದರು.

Advertisement

Advertisement
Tags :
LatetsNewsNewsKannadaಅಭಿವೃದ್ಧಿಅಲ್ಪಸಂಖ್ಯಾತಕಾಲೋನಿಕ್ರಿಯಾಯೋಜನೆ
Advertisement
Next Article