ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಚ್ಚಾಟನೆ ಕ್ರಮ ಪ್ರಶ್ನಿಸಿ ಸಿ.ಎಂ.ಇಬ್ರಾಹಿಂ ಮಾಡಿದ ದಾವೆ ವಜಾ

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ಮಾಡಿದ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ.
10:55 PM Mar 22, 2024 IST | Ashika S

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ಮಾಡಿದ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ.

Advertisement

ಉಚ್ಛಾಟಿನೆ ಬಳಿಕ  ಕೋರ್ಟ್‌ ಮೆಟ್ಟಿಲೇರಿದ್ದ ಸಿಎಂ ಇಬ್ರಾಹಿಂ ಅವರು  ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು.

ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದರು. ಈ ವೇಳೆ ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

Advertisement

ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.

ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ಸಿ.ಎಂ ಇಬ್ರಾಹಿಂ ಅವರನ್ನು ಅಕ್ಟೋಬರ್ 19ರಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.

Advertisement
Tags :
BENGALURELatetsNewsNewsKarnataka
Advertisement
Next Article