ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ: ಹರಿದು ಬಂದ ಜನಸಾಗರ
ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಪ್ರದೇಶದ ಜನರು ಸಾಗರದಂತೆ ಆಗಮಿಸಿದ್ದು ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಲಾಗಿದೆ.
03:05 PM Nov 27, 2023 IST
|
Ashika S
ಬೆಂಗಳೂರು: ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಪ್ರದೇಶದ ಜನರು ಸಾಗರದಂತೆ ಆಗಮಿಸಿದ್ದು ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಲಾಗಿದೆ.
Advertisement
ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿ ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ನೀಡಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕಿದೆ.
Advertisement
ಮತ್ತಷ್ಟು ಸುದ್ದಿಗಳಿಗಾಗಿ: ನವೆಂಬರ್ 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ
Advertisement
Next Article