ಕೆ.ಎಸ್.ಆರ್.ಟಿ.ಸಿಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್ಗಳಿಗೆ ಸಿಎಂ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದಲ್ಲಿ 100 ಹೊಸ ಕ್ಲಾಸಿಕ್ ಬಸ್ಗಳಿಗೆ ಹಸಿರು ನಿಶಾನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಒಂದು ಸಾವಿರ ಹೊಸ ಬಸ್ಗಳನ್ನು ಖರೀದಿಸುವ ಗುರಿ ಸಂಸ್ಥೆ ಹೊಂದಿದೆ.
ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮೆರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, 52 ಬಜೆಟ್ ಆಸನ, ಬಸ್ ಒಳಗೆ ಮತ್ತು ಹೊರಗೆ ಎಲ್ಇಡಿ ಮಾರ್ಗ ಫಲಕ ಅಳವಡಿಸಲಾಗಿದೆ. ಈ ಬಸ್ಗಳು ರಾಜಧಾನಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸಂಚರಿಸಲಿವೆ. ಇನ್ನು ಈ ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲೂ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಕೆಎಸ್ಆರ್ಟಿಸಿಗೆ 1000 ಹೊಸ ಬಸ್ ಈ ವರ್ಷ ಸೇರ್ಪಡೆಯಾಗುತ್ತವೆ. ಇಂದು 100 ಬಸ್ಗಳಿಗೆ ಚಾಲನೆ ನೀಡಿದ್ದೇವೆ. ನಾಲ್ಕು ವರ್ಷಗಳಿಂದ ಹೊಸ ಬಸ್ ಸೇರ್ಪಡೆ ಮಾಡಿರಲಿಲ್ಲ. ಕೊರೊನಾ ವೇಳೆ 3800 ಬಸ್ ನಿಲ್ಲಿಸಲಾಗಿತ್ತು. ಸಾರ್ವಜನಿಕರಿಗೆ ಬಹಳ ತೊಂದರೆ ಆಗಿತ್ತು. ನಾವು ಅಧಿಕಾರಕ್ಕೆ ಬಂದ ಮೇಲೆ 5800 ಬಸ್ಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ರಾಜ್ಯದ ಸುರಕ್ಷಿತ ಪ್ರಯಾಣಕ್ಕೆ ಬೇಕಾಗದ ಎಲ್ಲಾ ಸೌಲಭ್ಯ ಮಾಡಿಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
https://twitter.com/CMofKarnataka/status/1754385247385661466/photo/1