ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಜಿ.ಎಸ್ ಮಂಜುನಾಥ್ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿ  ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರ್ಮಿಕರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷ ಜಿ.ಎಸ್ ಮಂಜುನಾಥ್ ವಿರುದ್ಧ ಇದೀಗ ದೂರು ದಾಖಲಾಗಿದೆ.
08:16 PM Mar 11, 2024 IST | Ashika S

ಚಿತ್ರದುರ್ಗ: ಪ್ರಧಾನಿ ಮೋದಿ  ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರ್ಮಿಕರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷ ಜಿ.ಎಸ್ ಮಂಜುನಾಥ್ ವಿರುದ್ಧ ಇದೀಗ ದೂರು ದಾಖಲಾಗಿದೆ.

Advertisement

ಹಿರಿಯೂರಲ್ಲಿ ಡಾ. ಬಿಆರ್ ಅಂಬೇಡ್ಕರ್, ಬಾಬು ಜಗಜೀನವರಾಂ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಂಜನಾಥ್, ಚುನಾವಣೆ  ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ  ನರೇಂದ್ರ ಮೋದಿ ನನ್ನ ಕೈಗೆ ಸಿಕ್ರೆ ಕಾಲಲ್ಲಿರೋದು ತೆಗೆದು ಹೊಡೀತಿನಿ ಎಂದು ಹೇಳಿಕೆ ನೀಡಿದ್ದರು.

ಚಿತ್ರದುರ್ಗ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ಅವರು ನೀಡಿದ ದೂರಿನ ಅನ್ವಯ ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Advertisement

ಈ ಹೇಳಿಕೆ ಭಾರೀ ವೈರಲ್ ಆಗಿದ್ದು, ಮಂಜುನಾಥ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈಗ ಕಲ್ಲೇಶಯ್ಯ ಎನ್ನುವರು ಮಂಜುನಾಥ್ ವಿರುದ್ಧ ದೂರು ನೀಡಿದ್ದು, ಪ್ರದಾನಿ ಹುದ್ದೆಗೆ ಅಪಮಾನ, ಶಾಂತಿ ಕದಡುವ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

Advertisement
Tags :
CHITRADURGALatetsNewsNewsKannada
Advertisement
Next Article