ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಗುಮಾಸ್ತ ಲೋಕಾ ಬಲೆಗೆ

ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಗುಮಾಸ್ತರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಲೋಕಾಯುಕ್ತರು ನ.29ರಂದು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ.
08:29 PM Nov 29, 2023 IST | Ashika S

ಕುಂದಾಪುರ: ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಗುಮಾಸ್ತರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಲೋಕಾಯುಕ್ತರು ನ.29ರಂದು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ.

Advertisement

ಹಲವು ದಿನಗಳ ಹಿಂದೆ ಆಲೂರಿನಿಂದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಈಚರ್ ಲಾರಿಯನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದರು. ವಶಪಡಿಸಿಕೊಂಡ ವಾಹನವನ್ನು ಬಿಡಿಸಿಕೊಳ್ಳಲು ಅರಣ್ಯ ಕಚೇರಿ ಗುಮಾಸ್ತ ಮಂಜು ಪೂಜಾರಿ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲಾರಿಗೆ ಸಂಬಂಧಿಸಿದವರು ಲೋಕಾಯುಕ್ತರಿಗೆ ವಿಷಯ ತಿಳಿಸಿದ್ದು, ಬುಧವಾರ ಸಂಜೆ ಲಂಚ ವಿನಿಮಯದ ವೇಳೆ ಡಿಸಿಎಫ್ ಕಚೇರಿ ಮೇಲೆ ದಾಳಿ ನಡೆದಿದೆ. ಉಡುಪಿ ಲೋಕಾಯುಕ್ತ ಇನ್ಸ್ ಪೆಕ್ಟರ್ ರಫೀಕ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಸದ್ಯ ತನಿಖೆ ನಡೆಯುತ್ತಿದೆ.

Advertisement

Advertisement
Tags :
LatetsNewsNewsKannadaಉಪ ಅರಣ್ಯ ಸಂರಕ್ಷಣಾಧಿಕಾರಿಗುಮಾಸ್ತಮಾಹಿತಿಲಂಚ
Advertisement
Next Article