ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಳಿನ್ ಕುಮಾರ್ ಕಟೀಲ್ ಟಿಕೆಟ್ ಮಿಸ್: ವಾರಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ದೈವ

ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಈ ಬಾರಿ ಕೈ ತಪ್ಪಿದೆ. ಈ ನಡುವೆ ಈ ಬಗ್ಗೆ ದೈವವೊಂದು ನಳಿನ್ ಅವರಿಗೆ ವಾರಗಳ ಹಿಂದೆಯೇ ನೀಡಿದ್ದ ಎಚ್ಚರಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ.
01:31 PM Mar 14, 2024 IST | Ashitha S

ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಈ ಬಾರಿ ಕೈ ತಪ್ಪಿದೆ. ಈ ನಡುವೆ ಈ ಬಗ್ಗೆ ದೈವವೊಂದು ನಳಿನ್ ಅವರಿಗೆ ವಾರಗಳ ಹಿಂದೆಯೇ ನೀಡಿದ್ದ ಎಚ್ಚರಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ.

Advertisement

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೂರು ಬಾರಿ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ. ಈ ನಡುವೆ ದೈವವೊಂದು ನಳಿನ್ ಅವರಿಗೆ ಈ ಕುರಿತಂತೆ ಎಚ್ಚರಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದಲ್ಲಿ ನಡೆದಿದ್ದ ವಯನಾಟ್ ಕುಲವನ್ ದೈವದ ನೇಮೋತ್ಸವದಲ್ಲಿ ವಿಷ್ಣುಮೂರ್ತಿ ದೈವ ನಳಿನ್ ಗೆ ಎಚ್ಚರಿಕೆ ನೀಡಿತ್ತು.

ನಿನಗೆ ವೈರಿಗಳು ತುಂಬಾನೇ ಇದ್ದಾರೆ, ದಯಾದಿಗಳೇ ಪರಸ್ಪರ ವೈರಿಗಳಾಗಿ ಕುರುಕ್ಷೇತ್ರ ಯುದ್ಧ ನಡೆಯಲಿಲ್ಲವೇ. ಅಂದು ಪಾರ್ಥನಿಗೂ ಧರ್ಮ ಕಾಪಾಡುವಂತೆ ನಾನು‌ ಸಲಹೆ ನೀಡಿದ್ದೆ. ವೈರಿಗಳು ಎಷ್ಟಿದ್ದರೇನು ಕೊನೆಗೆ ಸತ್ಯ, ಧರ್ಮ ಮಾತ್ರ ಗೆಲ್ಲುವುದು. ಯಾವುದಕ್ಕೂ ಕುಗ್ಗಬೇಡ ಎಂದಿರುವ ದೈವ, ನೀನು ಹಿಂದುರುಗಿ ನೋಡಬೇಡ, ನಿನಗೆ ಮುಂದೊಂದು ದಿನ ಜಯವಿದೆ ಎಂದು ವಿಷ್ಣುಮೂರ್ತಿ ದೈವ ಸಂಸದ ನಳಿನ್ ಗೆ ಅಭಯ ನೀಡಿದೆ.

Advertisement

 

 

 

Advertisement
Tags :
BJPCongressGOVERNMENTindiaKARNATAKALatestNewsNewsKannadaಉಡುಪಿಮಂಗಳೂರು
Advertisement
Next Article