ಕೈವ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಧನ್ವೀರ್ ಮತ್ತು ಮೇಘಾ ಶೆಟ್ಟಿ ನಟನೆಯ ಕೈವ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ದರ್ಶನ್, ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು, ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಕನ್ನಡ ಚಿತ್ರರಂಗವನ್ನು ಬೆಂಬಲಿಸುವಂತೆ ಒತ್ತಾಯಿಸಿದರು. ಕಟೌಟ್ಗಳ ಮೇಲೆ ಹಾಲನ್ನು ಸುರಿದು ವ್ಯರ್ಥ ಮಾಡದಂತೆ ಹೇಳಿದ ಅವರು, ಅದರ ಬದಲಿಗೆ ನಾಯಿಗಳಿಗೆ ನೀಡುವಂತೆ ಸಲಹೆ ನೀಡಿದರು.
03:19 PM Nov 29, 2023 IST
|
Gayathri SG
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಧನ್ವೀರ್ ಮತ್ತು ಮೇಘಾ ಶೆಟ್ಟಿ ನಟನೆಯ ಕೈವ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ದರ್ಶನ್, ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು, ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಕನ್ನಡ ಚಿತ್ರರಂಗವನ್ನು ಬೆಂಬಲಿಸುವಂತೆ ಒತ್ತಾಯಿಸಿದರು. ಕಟೌಟ್ಗಳ ಮೇಲೆ ಹಾಲನ್ನು ಸುರಿದು ವ್ಯರ್ಥ ಮಾಡದಂತೆ ಹೇಳಿದ ಅವರು, ಅದರ ಬದಲಿಗೆ ನಾಯಿಗಳಿಗೆ ನೀಡುವಂತೆ ಸಲಹೆ ನೀಡಿದರು.
Advertisement
ಕೈವ ಚಿತ್ರ ಬೆಂಗಳೂರಿನ ತಿಗಳರಪೇಟೆಯಲ್ಲಿ ನಡೆಯುವ ಕರಗ ಉತ್ಸವದ ಹಿನ್ನೆಲೆಯಲ್ಲಿ 1983ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ನಿರ್ದೇಶಕ ಜಯತೀರ್ಥ ಅವರು ಇದೇ ಮೊದಲ ಬಾರಿಗೆ ಆಯಕ್ಷನ್ ಎಂಟರ್ಟೈನರ್ ಅನ್ನು ನಿರ್ದೇಶಿಸಿದ್ದಾರೆ.
ಈ ಸಂದರ್ಭದಲ್ಲಿ, ದರ್ಶನ್ ಅಭಿಮಾನಿಯಾದ ಧನ್ವೀರ್ ಅವರಿಗೆ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು ಪ್ರೀತಿಯಿಂದ 'ಶೋಕ್ ಧಾರ್' ಎಂಬ ಹೆಸರಿನ ಪುಂಗನೂರು ಕರುವನ್ನು ಉಡುಗೊರೆಯಾಗಿ ನೀಡಿದ್ದಾರೆ.
Advertisement
Advertisement
Next Article