For the best experience, open
https://m.newskannada.com
on your mobile browser.
Advertisement

ಪಾಕಿಸ್ತಾನ ಅಪರಿಚಿತರಿಂದ ಮತ್ತೊಬ್ಬ ಉಗ್ರನ ಅಂತ್ಯ

ಇದೀಗ ಮತ್ತೊಬ್ಬ ಭಾರತೀಯ ವಿರೋದಿ ಪಾಕಿಸ್ತಾನ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಕುಖ್ಯಾತ ಲಷ್ಕರ್-ಇ-ಇಸ್ಲಾಂ ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿ ಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
04:55 PM Apr 25, 2024 IST | Nisarga K
ಪಾಕಿಸ್ತಾನ ಅಪರಿಚಿತರಿಂದ ಮತ್ತೊಬ್ಬ ಉಗ್ರನ ಅಂತ್ಯ
ಪಾಕಿಸ್ತಾನ ಅಪರಿಚಿತರಿಂದ ಮತ್ತೊಬ್ಬ ಉಗ್ರನ ಅಂತ್ಯ

ಇಸ್ಲಾಮಾಬಾದ್‌: ಇದೀಗ ಮತ್ತೊಬ್ಬ ಭಾರತೀಯ ವಿರೋದಿ ಪಾಕಿಸ್ತಾನ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಕುಖ್ಯಾತ ಲಷ್ಕರ್-ಇ-ಇಸ್ಲಾಂ ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿ ಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಕಟುಕ ಸ್ವಭಾವ ಹೊಂದಿದ್ದ ಈತ ತನ್ನ ಚಟುವಟಿಕೆಗಳಿಂದ ಹಿಂದು ಜನಾಂಗಕ್ಕೆ ಹಿಂಸೆ ನೀಡುತ್ತಿದ್ದ. ಅಲ್ಲದೇ ಇಸ್ಲಾಂ ಗೆ ಮತಾಂತರ ಆಗುವಂತೆ ಒತ್ತಾಯಿಸಿ ಜೀವ ಬೆದರಿಕೆ ಹಾಕುತ್ತಿದ್ದ.

ಕಾಶ್ಮೀರಿ ಪಂಡಿತರು ವಾಸಿಸುತ್ತಿರುವ ಕಾಶ್ಮೀರದ ಬಾರಾಮುಲ್ಲಾದ ವೀರ್ವಾನ್‌ ಕಾಲೋನಿಗೆ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ 2022ರಲ್ಲಿ ಬೆದರಿಕೆ ಪತ್ರ ರವಾನಿಸಿತ್ತು. "ಪಂಡಿತರು ಮತ್ತು ಮುಸ್ಲಿಮರಲ್ಲದವರು (ಕಾಫಿರರು) ಇಸ್ಲಾಂಗೆ ಮತಾಂತರ ಆಗಬೇಕು. ಇಲ್ಲವೇ ಕಾಶ್ಮೀರ ಕಣಿವೆ ಬಿಡಬೇಕು. ಇಲ್ಲದೇ ಹೋದರೆ ಸಾವಿಗೆ ಸಿದ್ಧರಾಗಬೇಕು. ಕಾಶ್ಮೀರ ಇರುವುದು ಕೇವಲ ಅಲ್ಲಾನ ಅನುಯಾಯಿಗಳಿಗೆ ಮಾತ್ರ’ʼ ಎಂಬ ಬೆದರಿಕೆ ಒಡ್ಡಲಾಗಿತ್ತು.

Advertisement

ರಕ್ಷಣಾ ಪಡೆಗಳಿಗೆ ಈ ಪತ್ರ ಮೊದಲು ಪೋಸ್ಟ್‌ ಮೂಲಕ ಬಂದಿದ್ದು, ಅದನ್ನು ಅವರು ವೀರ್ವಾನ್‌ನಲ್ಲಿರುವ ಪಂಡಿತರ ಕಾಲೋನಿಯ ಅಧ್ಯಕ್ಷರಿಗೆ ನೀಡಿದ್ದರು. ಬಳಿಕ ಈ ಕುರಿತಾಗಿ ವಿಚಾರಣೆ ಕೂಡ ನಡೆದಿತ್ತು.

Advertisement
Tags :
Advertisement