ಆರ್ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ ಗೆದ್ದುಕೊಂಡಿತು. ತನ್ನ ರೋಚಕ ಅಟದೊಂದಿ ಆರ್ಸಿಬಿ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.ಈ ಗೆಲುವಿನ ಬಳಿಕ ಸಿಎಸ್ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆರ್ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡದೇ ಮೈದಾನದಿಂದ ತರಳಿದ್ದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.
ಪಂದ್ಯ ಮುಗಿದ ಬಳಿಕ ಸಿಎಸ್ಕೆ ಆಟಗಾರರು ಹಸ್ತಲಾಘವ ನೀಡಲು ಸರದಿ ಸಾಲಿನಲ್ಲಿ ಸಾಗಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಈ ವೇಳೆ ಗೆದ್ದ ಖುಷಿಯಲ್ಲಿದ್ದ ಆರ್ಸಿಬಿ ಆಟಗಾರರು ಸಂಭ್ರಮಿಸುತ್ತಿದ್ದರು .
ಇದೇ ವೇಳೆ ಆರ್ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಪೆವಿಲಿಯನ್ನತ್ತ ಮರಳಿದ್ದಾರೆ. ಈ ವೇಳೆ ಎದುರಿಗೆ ಸಿಕ್ಕ ಆರ್ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡುವ ಮೂಲಕ ಧೋನಿ ಡ್ರೆಸ್ಸಿಂಗ್ ರೂಮ್ಗೆ ಹೋಗಿದ್ದಾರೆ. ಇದೀಗ ಆರ್ಸಿಬಿ ಆಟಗಾರರಿಗೆ ಧೋನಿ ಶೇಕ್ ಹ್ಯಾಂಡ್ ನೀಡದೇ ತೆರಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.