For the best experience, open
https://m.newskannada.com
on your mobile browser.
Advertisement

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ ಗೆದ್ದುಕೊಂಡಿತು. ತನ್ನ ರೋಚಕ ಅಟದೊಂದಿ ಆರ್‌ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.ಈ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡದೇ ಮೈದಾನದಿಂದ ತರಳಿದ್ದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.
03:27 PM May 19, 2024 IST | Nisarga K
ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ
ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ ಗೆದ್ದುಕೊಂಡಿತು. ತನ್ನ ರೋಚಕ ಅಟದೊಂದಿ ಆರ್‌ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.ಈ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡದೇ ಮೈದಾನದಿಂದ ತರಳಿದ್ದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.

Advertisement

ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿ ಸಾಲಿನಲ್ಲಿ ಸಾಗಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಈ ವೇಳೆ ಗೆದ್ದ ಖುಷಿಯಲ್ಲಿದ್ದ ಆರ್​ಸಿಬಿ ಆಟಗಾರರು ಸಂಭ್ರಮಿಸುತ್ತಿದ್ದರು .

ಇದೇ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವೇಳೆ ಎದುರಿಗೆ ಸಿಕ್ಕ ಆರ್​ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡುವ ಮೂಲಕ ಧೋನಿ ಡ್ರೆಸ್ಸಿಂಗ್ ರೂಮ್​ಗೆ ಹೋಗಿದ್ದಾರೆ. ಇದೀಗ ಆರ್​ಸಿಬಿ ಆಟಗಾರರಿಗೆ ಧೋನಿ ಶೇಕ್ ಹ್ಯಾಂಡ್ ನೀಡದೇ ತೆರಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Advertisement

Advertisement
Tags :
Advertisement