ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೀಪಾವಳಿ ಹಬ್ಬ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ

ಮಣಿಪಾಲ್ ಮಹಿಳಾ ಸಮಾಜದ ವತಿಯಿಂದ ಎಂಜಿಎಂ ಕಾಲೇಜಿನ ಗೀತಾಂಜಲಿ ಹಾಲ್ ನಲ್ಲಿ ಆಯೋಜಿಸಲಾದ ಎರಡು ದಿನಗಳ 'ದೀಪಾವಳಿ ಹಬ್ಬ' ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಚಾಲನೆ ನೀಡಿದರು.
05:56 PM Nov 04, 2023 IST | Ashika S

ಉಡುಪಿ: ಮಣಿಪಾಲ್ ಮಹಿಳಾ ಸಮಾಜದ ವತಿಯಿಂದ ಎಂಜಿಎಂ ಕಾಲೇಜಿನ ಗೀತಾಂಜಲಿ ಹಾಲ್ ನಲ್ಲಿ ಆಯೋಜಿಸಲಾದ ಎರಡು ದಿನಗಳ 'ದೀಪಾವಳಿ ಹಬ್ಬ' ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಡಾ.ವಿದ್ಯಾಕುಮಾರಿ ಅವರು, ಸಾಕಷ್ಟು ಕೆಲಸದ ಒತ್ತಡಗಳಿದ್ದರೂ ಮಹಿಳೆಯರ ಕಾರ್ಯಕ್ರಮ ಎಂಬ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಮಣಿಪಾಲ‌ ಮಹಿಳಾ ಸಮಾಜದ ಸಮಾಜಮುಖಿ ಕೆಲಸಕ್ಕೆ ಪ್ರೋತ್ಸಾಹ ನೀಡಬೇಕಿದೆ ಎಂದರು.

ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ್, ಆದರ್ಶ್ ಆಸ್ಪತ್ರೆಯ ನಿರ್ದೇಶಕಿ ವಿಮಲಾ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಣಿಪಾಲ ಮಹಿಳಾ ಸಮಾಜದ ಅಧ್ಯಕ್ಷೆ ಡಾ.ಸುಲತಾ ಭಂಡಾರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಎರಡು ದಿನಗಳ ದೀಪಾವಳಿ ಫೆಸ್ಟ್ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕರಕುಶಲ ವಸ್ತುಗಳು, ಖಾದಿ ಬಟ್ಟೆಗಳು ಸಹಿತ ಜನೋಪಯೋಗಿ ವಸ್ತುಗಳ ಮಳಿಗೆಗಳನ್ನು ತೆರೆಯಲಾಗಿದ್ದು ದೀಪಾವಳಿ ಹಬ್ಬಕ್ಕೆ ಶಾಪಿಂಗ್ ಮಾಡಲು ಇದೊಂದು ಉತ್ತಮ ಅವಕಾಶವಾಗಿದೆ.

Advertisement
Tags :
LatetsNewsNewsKannadaಎಂಜಿಎಂಗೀತಾಂಜಲಿ ಹಾಲ್ದೀಪಾವಳಿ ಹಬ್ಬಮಣಿಪಾಲ್ಮಹಿಳಾ ಸಮಾಜ
Advertisement
Next Article