ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಲಯಾಳಂ ಇಂಡಸ್ಟ್ರಿಗೆ ಕಾಲಿಟ್ಟ ದೀಕ್ಷಿತ್‌ ಶೆಟ್ಟಿ

ಕನ್ನಡದ ‘ದಿಯಾ’ ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿದ್ದಾರೆ.
07:40 AM Dec 27, 2023 IST | Ashika S

ಬೆಂಗಳೂರು: ಕನ್ನಡದ ‘ದಿಯಾ’ ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿದ್ದಾರೆ.

Advertisement

ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ‘ಒಪ್ಪೀಸ್’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೆ ಕಥೆಯ ತಿರುಳು. ಫೆಬ್ರವರಿಯಿಂದ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸೌಜನ್ ಜೋಸೆಫ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳ ಹೂಡಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಚಿತ್ರಕ್ಕಿದೆ.

ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು ‘ದಿಯಾ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದ ಸ್ಪುರದ್ರೂಪಿ ನಟ ದೀಕ್ಷಿತ್ ಶೆಟ್ಟಿ. ಸದ್ಯ ಅವರೀಗ ‘ಬ್ಲಿಂಕ್’ ಎಂಬ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ರವಿಚಂದ್ರ ಎ.ಜೆ ಎಂಬುವರು ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ಶ್ರೀನಿಧಿ ‘ಬೆಂಗಳೂರು ಕಥೆ’ ಬರೆದು ನಿರ್ದೇಶನ ಮಾಡಿದ್ದಾರೆ. ಮಾರ್ಚ್ 8ಕ್ಕೆ ‘ಬ್ಲಿಂಕ್’ ರಿಲೀಸ್ ಆಗ್ತಿದೆ.

Advertisement

Advertisement
Tags :
‘ದಿಯಾ’LatetsNewsNewsKannadaದಸರಾಪ್ಯಾನ್-ಇಂಡಿಯಾಲವರ್ ಬಾಯ್ಸಿನಿಮಾ
Advertisement
Next Article