For the best experience, open
https://m.newskannada.com
on your mobile browser.
Advertisement

ಸದಾನಂದ ಗೌಡರಿಗೆ ಕಾಂಗ್ರೆಸ್‌ ಪಕ್ಷಕ್ಕೆ ಸ್ವಾಗತ ಇದೆ : ಡಿಕೆಶಿ ಹೇಳಿಕೆ

ರಾಜ್ಯದ ಮಾಜಿ ಸಿಎಂ ಸದಾನಂದ ಗೌಡ ಅವರು ಬೇರೆ ಪಕ್ಷಕೆ ಹೊಗುವ ಬಗ್ಗೆ ಈಗಾಗಲೇ ಕೆಲವು ಊಹಾಪೋಹಗಳು ಕೇಳಿ ಬಂದಿದ್ದವು. ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಬಿಜೆಪಿಯಿಂದ ಟಿಕೆಟ್‌ ಸಿಗುವುದೋ ಇಲ್ಲವೋ ಎಂಬ ಅನುಮಾನ ಸೃಷ್ಟಿಯಾಗಿದೆ ಅಲ್ಲದೇ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂಬ ಸದ್ದಿಯು ಕೇಳಿ ಬಂದಿತ್ತು ಆದರೆ ಅದು ಎಷ್ಟರ ಮಟ್ಟಿಗೆ ಸತ್ಯ ಎಂಬುದು ಇನ್ನು ತಿಳಿಯಬೇಕಿದೆ.
11:51 AM Mar 13, 2024 IST | Nisarga K
ಸದಾನಂದ ಗೌಡರಿಗೆ ಕಾಂಗ್ರೆಸ್‌ ಪಕ್ಷಕ್ಕೆ ಸ್ವಾಗತ ಇದೆ   ಡಿಕೆಶಿ ಹೇಳಿಕೆ
ಸದಾನಂದ ಗೌಡರಿಗೆ ಕಾಂಗ್ರೆಸ್‌ ಪಕ್ಷಕ್ಕೆ ಸ್ವಾಗತ ಇದೆ : ಡಿಕೆಶಿ ಹೇಳಿಕೆ

ಬೆಂಗಳೂರು: ರಾಜ್ಯದ ಮಾಜಿ ಸಿಎಂ ಸದಾನಂದ ಗೌಡ ಅವರು ಬೇರೆ ಪಕ್ಷಕೆ ಹೊಗುವ ಬಗ್ಗೆ ಈಗಾಗಲೇ ಕೆಲವು ಊಹಾಪೋಹಗಳು ಕೇಳಿ ಬಂದಿದ್ದವು. ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಬಿಜೆಪಿಯಿಂದ ಟಿಕೆಟ್‌ ಸಿಗುವುದೋ ಇಲ್ಲವೋ ಎಂಬ ಅನುಮಾನ ಸೃಷ್ಟಿಯಾಗಿದೆ ಅಲ್ಲದೇ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂಬ ಸದ್ದಿಯು ಕೇಳಿ ಬಂದಿತ್ತು ಆದರೆ ಅದು ಎಷ್ಟರ ಮಟ್ಟಿಗೆ ಸತ್ಯ ಎಂಬುದು ಇನ್ನು ತಿಳಿಯಬೇಕಿದೆ.

Advertisement

ಈ ಸಂದರ್ಭದಲ್ಲಿ ನೆನ್ನೆ ಕಲಬುರಗಿಯಲ್ಲಿ ಡಿಕೆಶಿ ಅವರು ಮಾಧ್ಯಮದೊಂದಿಗೆ ಮಾತನಾಡಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅನೇಕರು ಜನ ಪಕ್ಷ ಸೇರ್ಪಡೆಗಾಗಿ ನಮ್ಮನ್ನು ಈಗಾಗಲೇ ಭೇಟಿ ಮಾಡಿದ್ದಾರೆ. ನೆನ್ನೆ ಜಯಪ್ರಕಾಶ್ ಹೆಗ್ಡೆ, ಎಂಪಿಕೆ ನಮ್ಮ ಪಕ್ಷ ಸೇರಿದ್ದಾರೆ. ಇನ್ನೂ ಬಹಳ ಜನ ಬರುವವರಿದ್ದಾರೆ ಅದರಲ್ಲಿ ಹಾಲಿ ಬಿಜೆಪಿ ಎಂಪಿಗಳು ಇದ್ದಾರೆ ಎಂದಿದ್ದಾರೆ.ಸದಾನಂದ ಕೂಡ ನಿಮ್ಮ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ ಇದೆ ಎಂದಿದ್ದಾರೆ.

Advertisement
Advertisement
Tags :
Advertisement