ಸೌಂದರ್ಯ ಜಗದೀಶ್ ಆತ್ಮಹತ್ಯೆ ಸುದ್ದಿ ಖಚಿತ ಪಡಿಸಿದ ವೈದ್ಯರು
ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಅವರ ಸಾವಿನ ಸುದ್ದಿಯನ್ನ ಅವರ ಕುಟುಂಬಸ್ಥರು, ಸ್ನೇಹಿತರು ಖಚಿತಪಡಿಸಿದ್ದಾರೆ.
ಇಂದು ಬೆಳಗ್ಗೆ ಸೌಂದರ್ಯ ಜಗದೀಶ್ ಅವರು ತಮ್ಮ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡಲೇ ಅವರನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಆರೋಗ್ಯದ ಸಮಸ್ಯೆ ಜೊತೆಗೆ ಬಿಸಿನೆಸ್ ಕೂಡ ಲಾಸ್ ಆಗಿತ್ತು. ಈ ಎರಡು ಕಾರಣದಿಂದ ಸೌಂದರ್ಯ ಜಗದೀಶ್ ಅವರು ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.
ಸುಗುಣಾ ಆಸ್ಪತ್ರೆ ಬಳಿ ಸೌಂದರ್ಯ ಜಗದೀಶ್ ಸ್ನೇಹಿತ ಶ್ರೇಯಸ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಅನ್ನೋದು ಈಗ ಗೊತ್ತಿಲ್ಲ. ಇದು ನಿಜಕ್ಕೂ ದುಃಖದ ಸಂಗತಿ ಎಂದು ಹೇಳಿದ್ದಾರೆ.
ಸುಗುಣ ಆಸ್ಪತ್ರೆ ವೈದ್ಯರ ಮಾಹಿತಿ ಪ್ರಕಾರ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ. ಮೃತದೇಹವನ್ನು ಪೊಲೀಸರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದ್ದು, ಅಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದರು.
Read More: