ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿ ಪರಾರಿ: ಆರೋಪಿಗಳು ಪೊಲೀಸರ ವಶಕ್ಕೆ

ಬಾರ್‌ನಲ್ಲಿ ಕುಡಿಯಲು ಹೋದವರು ಮತ್ತಿನಲ್ಲಿ ಗಲಾಟೆ ಮಾಡಿಕೊಂಡು ನಶೆಯ ಗುಂಗಿನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
05:38 PM Apr 27, 2024 IST | Chaitra Kulal

ಆನೇಕಲ್: ಬಾರ್‌ನಲ್ಲಿ ಕುಡಿಯಲು ಹೋದವರು ಮತ್ತಿನಲ್ಲಿ ಗಲಾಟೆ ಮಾಡಿಕೊಂಡು ನಶೆಯ ಗುಂಗಿನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ನಾಗೇಶ್ ಎಂಬಾತ ತನ್ನ ಸ್ನೇಹಿತರಾದ ವೆಂಕಟಸ್ವಾಮಿ ಮತ್ತು ಮುನಿರಾಜು ಎಂಬುವವರಿಂದ ದಾಳಿಗೆ ಒಳಗಾಗಿದ್ದ.

ಳೆದ 22ರಂದು ನಾಗೇಶ್, ವೆಂಕಟಸ್ವಾಮಿ ಮತ್ತು ಮುನಿರಾಜು ಒಟ್ಟಾಗಿ ಮದ್ಯ ಸೇವಿಸಲು ಆನೇಕಲ್ ಪಟ್ಟಣದಲ್ಲಿರುವ ಸಂಜಯ್ ಬಾರ್‌ಗೆ ಹೋಗಿದ್ದರು. ಒಂದೇ ಟೇಬಲ್‌ನಲ್ಲಿ ಕುಳಿತು ಮದ್ಯ ಸೇವಿಸುವಾಗ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು.

Advertisement

ಈ ವೇಳೆ ನಾಗೇಶ್ ಮೇಲೆ ಮದ್ಯವನ್ನು ಸುರಿದು ಬೆಂಕಿ ಹಚ್ಚಿ ಆರೋಪಿಗಳು ಪರಾರಿಯಾಗಿದ್ದರು. ಸ್ನೇಹಿತರು ಹಚ್ಚಿದ ಬೆಂಕಿಗೆ ನಾಗೇಶ್‌ಗೆ ಶೇ. 30ರಷ್ಟು ಸುಟ್ಟ ಗಾಯವಾಗಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದ ಆನೇಕಲ್ ಪೊಲೀಸರು, ತಲೆಮರೆಸಿಕೊಂಡಿದ್ದ ವೆಂಕಟಸ್ವಾಮಿ ಮತ್ತು ಮುನಿರಾಜುರನ್ನು ಬಂಧಿಸಿದ್ದಾರೆ.

Advertisement
Tags :
FIRELatestNewsnerwskarnatakaPOLICErun awayಆನೇಕಲ್
Advertisement
Next Article