ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್
6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
05:21 PM Apr 16, 2024 IST
|
Ashitha S
ಬೆಂಗಳೂರು: 6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
Advertisement
ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್ವುಡ್ ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ಫಿಲ್ಮ್ ಚೇಂಬರ್ ನಿರ್ಧರಿಸಿದೆ.
ಇಂದು ನಮ್ಮನ್ನು ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧಾರ ಮಾಡಿರುವುದಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ. ಎಲ್ಲರು ಸಹಕಾರ ನೀಡುವಂತೆ ಮನವಿ ಸಹ ಮಾಡಿಕೊಂಡಿದ್ದಾರೆ.
Advertisement
Advertisement
Next Article