ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಕಿದ್ದ ಮಾಜಿ ಕಾರ್ಪೊರೇಟರ್ ಅರೆಸ್ಟ್

ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಕಿದ್ದ ಮಾಜಿ ಕಾರ್ಪೊರೇಟರ್ ಪದ್ಮರಾಜ್​ನನ್ನು ಬಂಧಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
01:28 PM Feb 14, 2024 IST | Ashitha S

ಬೆಂಗಳೂರು: ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಕಿದ್ದ ಮಾಜಿ ಕಾರ್ಪೊರೇಟರ್ ಪದ್ಮರಾಜ್​ನನ್ನು ಬಂಧಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

Advertisement

"ನನಗೆ ಹಣ ಬೇಕು. ಇಲ್ಲದಿದ್ರೆ ನಿನ್ನನ್ನು ಬಿಡುವುದಿಲ್ಲ ಕೊಲ್ಲುತ್ತೇನೆ. ತಾಕತ್ತಿದ್ರೆ ಬಾ ಮನೆ ಹತ್ತಿರ ಎಂದು ಮಾಜಿ ಪದ್ಮರಾಜ್ ನನಗೆ ಆವಾಜ್ ಹಾಕಿದ್ದಾನೆ ಎಂದು ಮಾಜಿ ಸಚಿವ ಗೋಪಾಲಯ್ಯಗೆ ಆರೋಪಿಸಿದ್ದರು. ಪದ್ಮರಾಜ್ ಬಸವೇಶ್ವರನಗರ ಮಾಜಿ ಕಾರ್ಪೊರೇಟರ್​ ಆಗಿದ್ದಾರೆ.

ಗೋಪಾಲಯ್ಯರವರು ಬಿಜಿಎಸ್​ನಲ್ಲಿ ಪದ್ಮರಾಜ್ ಮಗಳಿಗೆ ಸೀಟ್ ಕೊಡಿಸಿದ್ದರಂತೆ. ಸಚಿವರಾಗಿದ್ದ ವೇಳೆ ರಾಜಾಜಿನಗರ ESI ಆಸ್ಪತ್ರೆಯಲ್ಲಿ ವೈದ್ಯೆ ಕೆಲಸವನ್ನು ಕೊಡಿಸಿದ್ದರಂತೆ. ಆದರೀಗ ಮಧ್ಯರಾತ್ರಿ ಮಾಜಿ ಸಚಿವ ಗೋಪಾಲಯ್ಯಗೆ ಪದ್ಮರಾಜ್​ ಕರೆ ಮಾಡಿ ನನಗೆ ಹಣ ಬೇಕು ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕಳೆದ ರಾತ್ರಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಇಂದು ಬೆಳಗ್ಗೆ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಿ ಸದನದಲ್ಲಿ ಪ್ರಸ್ತಾಪಿಸಿದ್ದರು.

Advertisement

Advertisement
Tags :
crimeindiaKARNATAKALatestNewsNewsKannadaPOLICEಕೊಲೆ ಬೆದರಿಕೆಬೆಂಗಳೂರು
Advertisement
Next Article