ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಾವು-ಮುಂಗುಸಿ ನಡುವೆ ರೋಚಕ ಕಾದಾಟದ ವಿಡಿಯೋ ವೈರಲ್: ಈ ದ್ವೇಷಕ್ಕೆ ಕಾರಣವೇನು ?

ಹಾವು ಹಾಗೂ ಮುಂಗುಸಿ ಪರಸ್ಪರ ಕಾದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ರೆಂಡಿಂಗ್ ನಲ್ಲಿದ್ದು ಇದುವರೆಗೆ 13 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.
12:18 PM Apr 10, 2024 IST | Ashitha S

ವೈರಲ್: ಹಾವು ಹಾಗೂ ಮುಂಗುಸಿ ಪರಸ್ಪರ ಕಾದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ರೆಂಡಿಂಗ್ ನಲ್ಲಿದ್ದು ಇದುವರೆಗೆ 13 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.

Advertisement

ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾದ ಈ ವೀಡಿಯೊದಲ್ಲಿ ಮುಂಗುಸಿ ಮತ್ತು ಹಾವಿನ ನಡುವಿನ ಕ್ರೂರ ಹೋರಾಟವನ್ನು ತೋರಿಸುತ್ತದೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಇನ್ನು ಹಾವು ಮುಂಗುಸಿ ದ್ವೇಷದ ಹಿಂದಿನ ವೈಜ್ಞಾನಿಕ ಕಾರಣಗನ್ನ ನೋಡುವುದಾದರೇ, ಮುಂಗುಸಿಗಳು ಪೊದೆಗಳ ಕೆಳಗೆ ಅಥವಾ ಹುಲ್ಲು ಗಾವಲುಗಳ ನಡುವೆ ಪೊಟರೆಗಳನ್ನು ನಿರ್ಮಿಸಿಕೊಂಡು ಆ ಪೊಟರೆಗಳಲ್ಲೇ ವಾಸಮಾಡುತ್ತವೆ, ಹಾಗೂ ತಮ್ಮ ಮರಿಗಳನ್ನು ಪೊಟರೆಯ ಒಳಗೆ ಕೆಲದಿನಗಳ ಕಾಲ ಆರೈಕೆ ಮಾಡುತ್ತವೆ.

Advertisement

ಮುಂಗುಸಿಗಳು ನಿರ್ಮಿಸಿದ ಪೊಟರೆಗಳನ್ನು ಕಂಡ ತಕ್ಷಣವೇ ಅದರೊಳಗೆ ಹೊಕ್ಕು ಅದರೊಳಗಿರುವ ಚಿಕ್ಕ ಚಿಕ್ಕ ಮರಿಗಳನ್ನು ತಿನ್ನುವುದು ಹಾವಿನ ಜನ್ಮ ದತ್ತ ಗುಣ.ಹಾಗೂ ಸಾಮಾನ್ಯವಾಗಿ ಇಂತಹಾ ಪೊಟರೆಯೊಳಗೆ ತಾನೂ ಸಹಾ ವಾಸಿಸಲೂ ಹವಣಿಸುವುದೂ ಸಹಾ ಹಾವಿನ ಮೂಲ ಗುಣಗಳಲ್ಲೊಂದಾಗಿದೆ.

ಮುಂಗುಸಿಯು ತನ್ನ ಸಂತಾನವನ್ನು ನಾಶಮಾಡುವಲ್ಲಿ ಮುಂಚೂಣಿಯಲ್ಲಿರು ಹಾವುಗಳ ಬಗ್ಗೆ ತಲೆ ಮಾರುಗಳಿಂದಲೂ ಎಚ್ಚರಿಕೆಯಿಂದಿರುತ್ತವೆ. ಹಾವುಗಳು ಹೊಕ್ಕದ ಮುಂಗುಸಿಯ ಬಿಲಗಳೇ ಇಲ್ಲ ಎಂದು ಹೇಳಬಹುದು .

ಹೀಗೆ ತನ್ನ ಜೀವಿತಾವದಿಯ ಶತೃವಾದ ಹಾವುಗಳನ್ನು ಮುಂಗುಸಿಗಳು ದ್ವೇಷಿಸುತ್ತಲೇ ಇರುತ್ತವೆ.. ಆದರೆ ಹಾವು ಮುಂಗುಸಿಗಳನ್ನು ದ್ವೇಷಿಸುವ ಬದಲಾಗಿ ಮುಂಗುಸಿಗಳು ನಿರ್ಮಿಸಿರುವ ಪೊಟರೆಗಳಲ್ಲಿ ಠಿಕಾಣಿ ಹೂಡಲು ಹಾಗೂ ಅವುಗಳ ಮರಿಗಳನ್ನು ತಿನ್ನಲು ಹವಣಿಸುತ್ತಿರುತ್ತದೆ.

ಹಾವಿನ ಬಗ್ಗೆ ಸದಾ ಎಚ್ಚರಿಕೆಯಿಂದಿರುವ ಮುಂಗುಸಿಯು ಹಾವನ್ನು ಕಂಡ ತಕ್ಷಣ ಅಥವಾ ಹಾವಿನ ಚಲನೆಯ ಶಬ್ದವನ್ನು ಕೇಳಿದ ತಕ್ಷಣ ಅಥವಾ ತನ್ನ ಮರಿಗಳು ಸೂಚಿಸುವ ಅಪಾಯದ ಸಂಜ್ಞೆಗಳನ್ನು ತಿಳಿದ ತಕ್ಷಣವೇ ಜಾಗರೂಕವಾಗಿ ಹಾವಿನ ಮೇಲೆ ದಾಳಿಗಿಳಿಯುತ್ತದೆ.

ಹಾವಿನ ಕಡಿತದಿಂದ ಪಾರಾಗಲು ಮುಂಗುಸಿಯು ಬಹಳ ಚಾಕಚಕ್ಯತೆಯಿಂದ ಹೋರಾಡುತ್ತದೆ. ಕೆಲವೇ ಸಮಯದಲ್ಲಿ ಹಾವಿನ ದೇಹದ ಯಾವುದಾದರೊಂದು ಭಾಗವನ್ನು ತನ್ನ ಹಲ್ಲುಗಳಿಂದ ಬಲವಾಗಿ ಕಚ್ಚಿ ಹಾವಿಗೆ ಭಯವನ್ನು ಉಂಟು ಮಾಡುತ್ತದೆ.

ಒಂದು ವೇಳೆ ಹಾವಿನ ಕಡಿತಕ್ಕೆ ಮುಂಗುಸಿಯೇ ಒಳಗಾದರೆ ಹಾವಿನ ವಿಷದಿಂದ ಪಾರಾಗುವ ಸಸ್ಯವನ್ನು ತಿಂದು ಬಚಾವಾಗುತ್ತದೆ ಎಂದೂ ಸಹಾ ಹೇಳಲಾಗುತ್ತದೆ. ಆದರೇ ಹಾವಿನ ಕಡಿತಕ್ಕೆ ಒಳಪಡದೆ ದಾಳಿಮಾಡುವ ಕೌಶಲ್ಯವನ್ನು ಮುಂಗುಸಿಗಳು ರೂಡಿಸಿಕೊಂಡಿರುತ್ತವೆ.

Advertisement
Tags :
indiaKARNATAKALatestNewsNewsKannadaNewsKarnatakaViral
Advertisement
Next Article